ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸವಳಂಗ (Savalanga) ರಸ್ತೆಯ ಕಲ್ಲಾಪುರ (Kallapura) ಸಮೀಪ ಭಾನುವಾರ ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
READ | ಈಯರ್ ಬಡ್ಸ್ ಸೇರಿದಂತೆ 15ಕ್ಕೂ ಹೆಚ್ಚು ಸಾಮಗ್ರಿಗಳಲ್ಲಿ ಪ್ಲಾಸ್ಟಿಕ್ ಬ್ಯಾನ್!
ಎಂಜಿನಿಯರಿಂಗ್ ಲೇಜು (Engineering college) ವಿದ್ಯಾರ್ಥಿಗಳಾದ ವಿವೇಕ್, ಕಾರ್ತಿಕ್ ಅವರು ದಾವಣಗೆರೆ(Davanagere)ಯವರಾಗಿದ್ದು, ಮೋಹನ್ ಅವರು ಶಿವಮೊಗ್ಗದರೆಂದು ತಿಳಿದುಬಂದಿದೆ. ದಾವಣಗೆರೆಯ ಜಯನಗರ ನಿವಾಸಿ ರುದ್ರೇಶ್ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಸಹ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಡೆದಿದ್ದೇನು?
ಕಾರಿನಲ್ಲಿ ಶಿವಮೊಗ್ಗಕ್ಕೆ ಬಂದು ವಾಪಸ್ ದಾವಣಗೆರೆಗೆ ತೆರಳುತ್ತಿದ್ದಾಗ ಶಿವಮೊಗ್ಗ (shimoga) ಕಡೆಗೆ ಬರುತ್ತಿದ್ದ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಲಾರಿಯ ಮುಂಭಾಗಕ್ಕೆ ಜಖಂಗೊಂಡಿದ್ದು, ಕಾರು ನಜ್ಜುಗುಜ್ಜಾಗಿದೆ.
ಇವರು ಶಿವಮೊಗ್ಗಕ್ಕೆ ಆಗಮಿಸಿದ್ದು, ಊಟ ಮುಗಿಸಿಕೊಂಡು ವಾಪಸ್ ದಾವಣಗೆರೆಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲಿಸಿದ್ದಾರೆ.
https://suddikanaja.com/2022/12/08/job-notification-of-karnataka-state-rural-livelihood-promotion-society/