ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತಾಲೂಕಿನ ವೀರಣ್ಣಬೆನವಳ್ಳಿ ಸಮೀಪ ಸೋಮವಾರ ಬೆಳ್ಳಂಬೆಳಗ್ಗೆ ಫೈರಿಂಗ್ ನಡೆದಿದ್ದು, ಮತ್ತೆ ಪೊಲೀಸರ ಬಂದೂಕು ಸದ್ದು ಮಾಡಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ಕಾರು ಸುಟ್ಟ ಪ್ರಕರಣದ ಆರೋಪಿಯನ್ನು ಬಂಧಿಸಲು ತೆರಳಿದಾಗ ದೊಡ್ಡಪೇಟೆ ಸಿಬ್ಬಂದಿ ಶಿವರಾಜ್ ಎಂಬುವವರ ಮೇಲೆ ಆರೋಪಿಯು ಹಲ್ಲೆಗೆ ಮುಂದಾಗಿದ್ದು, ಆಗ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್.ಐ ರಮೇಶ್ ಅವರು ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಅದಕ್ಕೂ ಕ್ಯಾರೆ ಎನ್ನದ ಆರೋಪಿ ಹಲ್ಲೆಗೆ ಮುಂದಾದಾಗ ಸಿಬ್ಬಂದಿಯ ರಕ್ಷಣೆಗಾಗಿ ಆರೋಪಿಯ ಮೇಲೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ.
READ | ಶಿವಮೊಗ್ಗದಲ್ಲೂ ಸದ್ದು ಮಾಡಿದ್ದ ಹೋರಿ ‘ಹೊನ್ನಾಳಿ ಡಾನ್’ ಇನ್ನಿಲ್ಲ, ಬೈಕ್, ಚಿನ್ನ, ಫ್ರಿಡ್ಜ್ ಗೆದ್ದಿದ್ದ ಹೋರಿ
ಇಬ್ಬರೂ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್
ಪ್ರವೀಣ್ ಅಲಿಯಾಸ್ ಮೋಟು ಪ್ರವೀಣ್ ಎಂಬಾತನ ಮೇಲೆ ಒಂದು ಸುತ್ತಿನ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಪ್ರವೀಣನಿಂದ ಹಲ್ಲೆಗೊಳಗಾದ ಸಿಬ್ಬಂದಿ ಶಿವರಾಜ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರವೀಣ್ ವಿರುದ್ಧ 15 ಕೇಸ್
ಮೋಟು ಪ್ರವೀಣ್ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಕೊಲೆ ಯತ್ನ, ಎನ್.ಡಿಪಿಎಸ್ ಕಾಯ್ದೆ ಸೇರಿ ಒಟ್ಟು 15 ಪ್ರಕರಣಗಳು ದಾಖಲಾಗಿವೆ.
https://suddikanaja.com/2022/12/17/karnataka-examination-authority-kea-has-announced-a-notification-for-the-recruitment/