ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಆಗ್ರಹಿಸಿ ವ್ಯಕ್ತಿಯೊಬ್ಬರು ಏಕಾಏಕಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಉಪವಾಸ ಕುಳಿತ ಘಟನೆ ತಾಲ್ಲೂಕಿನ ಮಂಡಘಟ್ಟ ಪಂಚಾಯಿತಿಯಲ್ಲಿ ನಡೆದಿದೆ.
READ | ಹೊಸ ವರ್ಷಕ್ಕೆ ಶಿವಮೊಗ್ಗ ನಗರದ 5 ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಯಾವ್ಯಾವ ಮಾರ್ಗ?
ಮಂಡಘಟ್ಟದ ನಿವಾಸಿ ಉಮೇಶ್ ಎಂಬುವವರು ಕಳೆದ ನಾಲ್ಕು ವರ್ಷಗಳಿಂದ ರಾಜಕಾಲುವೆ ಒತ್ತುವರಿಯಾಗಿದ್ದುದ, ತಮ್ಮ ಮನೆಗೆ ಮಳೆ ನೀರು ನುಗ್ಗುತ್ತಿದೆ ಎಂದು ಆರೋಪಿಸಿದ್ದಾರೆ.
ನೀರು ನುಗ್ಗುತ್ತಿರುವುದರಿಂದ ತಮಗೆ ಪ್ರತಿ ವರ್ಷ ಸಂಕಷ್ಟ ಎದುರಾಗುತ್ತಿದೆ. ಈ ಬಗ್ಗೆ ಗ್ರಾ.ಪಂ., ತಾ.ಪಂ. ಹಾಗೂ ಜಿ.ಪಂ. ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.
ತಾಲೂಕು ಪಂಚಾಯಿತಿಯಿಂದ ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು. ಒಂದು ತಿಂಗಳೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಆಮರಣಾಂತ ಉಪವಾಸ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಥಳದಲ್ಲಿ ಗ್ರಾ.ಪಂ. ಕಾರ್ಯದರ್ಶಿ ಮಧುಸೂದನ್, ಗ್ರಾಮಸ್ಥರು ಇದ್ದರು.
https://suddikanaja.com/2022/12/27/two-covid-positive-in-shimoga/