ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಡಿ.10ರಂದು ಸಂಜೆ 5.30ಕ್ಕೆ ಭದ್ರಾವತಿಯ ಹಳೇನಗರದ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ವಿಶ್ವ ಮಾನವ ಸಮಾವೇಶ ಆಯೋಜಿಸಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್. ರಾಜು ತಿಳಿಸಿದರು.
ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ನೆನಪಿನಲ್ಲಿ ವಿಶ್ವಮಾನವ ಸಮಾವೇಶ ಮತ್ತು ವಿಶ್ವ ಮಾನವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ಪ್ರಜ್ಞಾವಂತ ರಾಜಕಾರಣಿ ವೈ.ಎಸ್.ವಿ. ದತ್ತಾ, ಹೋರಾಟಗಾರ ಡಿ.ಸಿ ಮಾಯಣ್ಣ, ರೈತಹೋರಾಟಗಾರ ಕೆ.ಟಿ. ಗಂಗಾಧರ್ ಅವರಿಗೆ ಈ ಬಾರಿ ವಿಶ್ವಮಾನವ ಪ್ರಶಸ್ತಿ ಪ್ರದಾನ ಮಾಡಲಾಗುವುದು.
READ | ಹುಷಾರ್! ಎಲ್ಲೆಂದರಲ್ಲಿ ಉಗುಳಿದರೆ ಬೀಳುತ್ತೆ ದಂಡ, ಶಿರಾಳಕೊಪ್ಪ ಪುರಸಭೆಯಿಂದ ಮಹತ್ವದ ಸೂಚನೆ
ಚಿಟಿಕೆ ಉಪ್ಪು ಸಂಗ್ರಹಿಸಿ ಕೇಂದ್ರ, ರಾಜ್ಯ ಸರ್ಕಾರಕ್ಕೆ ಮನವಿ
ಭದ್ರಾವತಿ ಕ್ಷೇತ್ರದ ಅಭಿವೃದ್ಧಿ, ಎಂಪಿಎಂ ಹಾಗೂ ವಿಐಎಸ್ಎಲ್ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲು ಉಪ್ಪಿನ ಚಳವಳಿಯ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಡಿ.10ರಿಂದ ಜ.26ರ ವರೆಗೆ ಭದ್ರಾವತಿಯ ಎಲ್ಲ ವಾರ್ಡ್’ಗಳ ಮನೆಮನೆಗೆ ತೆರಳಿ ನಾಗರಿಕರಿಂದ ಚಿಟಿಕೆ ಉಪ್ಪು ಸಂಗ್ರಹಿಸಿ ಜ.26ರಂದು ಬೆಳಗ್ಗೆ 11 ಗಂಟೆಗೆ ಭದ್ರಾವತಿಯ ಅಂಬೇಡ್ಕರ್ ಸರ್ಕಲ್ನಲ್ಲಿ ಉಪ್ಪಿನೊಂದಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.