ಸುದ್ದಿ ಕಣಜ.ಕಾಂ ಸಾಗರ
SAGAR: ಬಜರಂಗ ದಳ ಸಹ ಸಂಚಾಲಕ ಸುನೀಲ್ ಎಂಬಾತನ ಮೇಲೆ ದುಷ್ಕರ್ಮಿಯೊಬ್ಬ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಬಂದ್’ಗೆ ಕರೆ ನೀಡಲಾಗಿದೆ.
READ | ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಡೇಟ್ ಫಿಕ್ಸ್
ಸುನೀಲ್ ಅವರು ಬೈಕಿನಲ್ಲಿ ಕೆಲಸಕ್ಕೆ ಹೋಗುತ್ತಿದ್ದಾಗ ಬಿ.ಎಚ್.ರಸ್ತೆಯ ಶೋರೂಂವೊಂದರ ಸಮೀಪ ಯುವಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದಾನೆ. ಅದೃಷ್ಟವಷಾತ್ ಸುನೀಲ್ ತಪ್ಪಿಸಿಕೊಂಡಿದ್ದಾನೆ.
ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುನೀಲ್ ಮೇಲೆ ಮಾರಕಾಸ್ತ್ರ ಬೀಸಿದ್ದೇ ಆತ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ.
ಸುನೀಲ್ ಬರುವ ಮುನ್ನವೇ ಸಮೀರ್ ಎಂಬಾತ ಅಲ್ಲಿ ಬಂದು ನಿಂತಿದ್ದ. ಬೈಕಿನಲ್ಲಿ ಮಾರಾಕಾಸ್ತ್ರ ತೆಗೆದು ಸುನೀಲ್ ಮೇಲೆ ಬೀಸಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಯಾರಿಗೂ ಗಾಯಗಳಾಗಿಲ್ಲ. ಆರೋಪಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚಿಸಲಾಗಿದೆ.
– ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಜ.10ರಂದು ಸಾಗರ ಬಂದ್’ಗೆ ಕರೆ
ಸುನೀಲ್ ಮೇಲೆ ಹಲ್ಲೆ ಯತ್ನ ನಡೆದ ವಿಚಾರ ವೈರಲ್ ಆಗಿದ್ದೇ ಹಿಂದೂ ಸಂಘಟನೆಗಳ ಪ್ರಮುಖರು ಜ.10ರಂದು ಸಾಗರ ಬಂದ್ ಮಾಡಲು ಕರೆ ನೀಡಿದ್ದಾರೆ. ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಹಿಂದೂ ಸಂಘಟನೆ, ಜನಪ್ರತಿನಿಧಗಳ ಆಕ್ರೋಶ
ಸುನೀಲ್ ಮೇಲಿನ ಹಲ್ಲೆ ಖಂಡಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಗರಂ ಆಗಿದ್ದಾರೆ. ಸಾಗರ ಟೌನ್ ಠಾಣೆಯ ಮುಂದೆ ಪ್ರತಿಭಟನೆ ಕೂಡ ನಡೆದಿದೆ. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಆರೋಪಿಗಳನ್ನು ಬಂಧಿಸುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ ಎನ್ನಲಾಗಿದೆ.
ಶಾಸಕ ಹರತಾಳು ಹಾಲಪ್ಪ ಅವರು ಸುನೀಲ್ ಮನೆಗೆ ಭೇಟಿ ನೀಡಿದ್ದಾರೆ. ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಆರೋಪಿಗಳನು ಬಂಧಿಸುವಂತೆ ಆಗ್ರಹಿಸಿದ್ದಾರೆ.
https://suddikanaja.com/2023/01/05/home-minister-araga-jnanendra-help/