ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯ ಸರ್ಕಾರವು 2023ರ ಜನವರಿಯಿಂದ ರಾಜ್ಯದ ಎಲ್ಲ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಎನ್ಎಫ್ಎಸ್ಎ ಹಂಚುವ 5 ಕೆ.ಜಿ. ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ. ಅಕ್ಕಿಯನ್ನು ವಿತರಿಸಲು ಆದೇಶಿಸಿದೆ.
READ | ಶಿಕಾರಿಪುರದಲ್ಲಿ ಜ.17ರಂದು ನಡೆಯಲಿದೆ ಭೂನಷ್ಟ ಪರಿಹಾರ ನಿಗದಿ ಸಭೆ, ಕಡ್ಡಾಯವಾಗಿ ಹಾಜರಾಗಿ
ಸಕಾಲದಲ್ಲಿ ಅಕ್ಕಿ ಸರಬರಾಜು ಲಭ್ಯವಿಲ್ಲದ್ದರಿಂದ ಹಾಗೂ ನ್ಯಾಯಬೆಲೆ ಅಂಗಡಿಗಳ ಬಿಲ್ಲಿಂಗ್ ವ್ಯವಸ್ಥೆ ಮತ್ತು ಪಿಓಎಸ್ ಆರಂಭಗೊಂಡಿರುವ ಕಾರಣ 2023ರ ಫೆಬ್ರವರಿಯಿಂದ 1 ಕೆ.ಜಿ. ಅಕ್ಕಿ ವಿತರಣೆ ಮಾಡಲಾಗುವುದು. ಈಗಾಗಲೇ ಆನ್ಲೈನ್ ಹಂಚಿಕೆಯಂತೆ ಜನವರಿಯಲ್ಲಿ ಪ್ರತಿ ಫಲಾನುಭವಿಗೆ ಎನ್ಎಫ್ಎಸ್ಎ 5 ಕೆ.ಜಿ.ಅಕ್ಕಿಯನ್ನು ಮಾತ್ರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.