ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಫೆಬ್ರವರಿ 5ರಂದು ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ (ಎನ್.ಇ.ಎಸ್) ಮೈದಾನದಲ್ಲಿ ಫೆಬ್ರವರಿ 5ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಬಿಜೆಪಿಯಿಂದ ಪೇಜ್ ಪ್ರಮುಖರ ಸಮಾವೇಶ ಸಭೆ ಆಯೋಜಿಸಲಾಗಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ (KS Eshwarappa) ಹೇಳಿದರು.
ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar kateel) ಉದ್ಘಾಟಿಸುವರು. ನಗರದ ಸುಮಾರು 8,426 ಪೇಜ್ (Pej) ಪ್ರಮುಖರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
READ | ಶಿಮುಲ್ ವ್ಯಾಪ್ತಿಯ 3 ಜಿಲ್ಲೆಗಳಲ್ಲಿ ಹಾಲು ಖರೀದಿ ದರದಲ್ಲಿ ದಿಢೀರ್ ಏರಿಕೆ, ಎಂದಿನಿಂದ ಅನ್ವಯ?
ಐದಾರು ಮನೆಗೊಬ್ಬ ಪೇಜ್ ಪ್ರಮುಖ
ಬಿಜೆಪಿ ಪಕ್ಷದಲ್ಲಿ ನಗರದಲ್ಲಿ 69 ಶಕ್ತಿ ಕೇಂದ್ರ(Shakthi Kendra), 299 ಬೂತ್(Booth)ಗಳಿವೆ. ಪ್ರತಿ ಬೂತ್ ವ್ಯಾಪ್ತಿಯಲ್ಲಿ 5-6 ಮನೆಗೆ ಒಬ್ಬರಂತೆ ಪೇಜ್ ಪ್ರಮುಖರನ್ನು ನಿಯೋಜಿಸಲಾಗಿದೆ. ವಿಧಾನಸಭೆ, ಮಹಾನಗರ ಪಾಲಿಕೆ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪೇಜ್ ಪ್ರಮುಖರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ಪೇಜ್ ಪ್ರಮುಖರ ಜವಾಬ್ದಾರಿ ಏನು?
- ಸೈದ್ಧಾಂತಿಕವಾಗಿ ಮತದಾರರನ್ನು ಒಪ್ಪಿಸುವ ಕೆಲಸ ಮಾಡುವರು.
- ಬೂತ್ ಮಟ್ಟದಲ್ಲಿ ವಿಜಯ್ ಸಂಕಲ್ಪ ಅಭಿಯಾನ ನಡೆಸಲಾಗುತ್ತಿದ್ದು, ಇದರಲ್ಲಿಯೂ ಪೇಜ್ ಪ್ರಮುಖರು ಭಾಗವಹಿಸುತ್ತಿದ್ದಾರೆ.
- ಒಟ್ಟು ಐದು ಅಂಶಗಳನ್ನು ಜನರಿಗೆ ತಿಳಿಸುವ ಕೆಲಸ ಪೇಜ್ ಪ್ರಮುಖರದ್ದಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾವೇಶ ನಡೆಸುವ ಗುರಿ ಇರಿಸಿಕೊಳ್ಳಲಾಗಿದೆ.
- ಪಕ್ಷದ ಸಿದ್ಧಾಂತ, ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡುವುದು.
ಮಾಧ್ಯಮಗೋಷ್ಠಿಯಲ್ಲಿ ಬಿಜೆಪಿ ನಗರ ಅಧ್ಯಕ್ಷ ಜಗದೀಶ್, ಪಾಲಿಕೆ ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್, ಸದಸ್ಯ ಎಸ್.ಎನ್. ಚನ್ನಬಸಪ್ಪ, ಕೆ.ವಿ.ಅಣ್ಣಪ್ಪ, ಎಂ.ಜಿ.ಬಾಲು ಇದ್ದರು.