CM visit | ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ‌ ಬಸವರಾಜ್ ಬೊಮ್ಮಾಯಿ, ಯಾವ್ಯಾವ ಕಾರ್ಯಕ್ರಮಗಳಲ್ಲಿ ಭಾಗಿ?

Basavaraj bommia

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಫೆಬ್ರವರಿ 8ರಂದು ಶಿವಮೊಗ್ಗ ನಗರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಮಾತನಾಡಿದರು.
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು. ಎಲ್ಲ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ವಿವರಗಳನ್ನು ಜಿಲ್ಲಾಧಿಕಾರಿ ಅವರಿಗೆ ತಕ್ಷಣ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.

READ | ಯಡಿಯೂರಪ್ಪ ಜನ್ಮ‌ದಿನವೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ

23 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್
ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ 23 ಶಾಲೆಗಳಲ್ಲಿ ಸ್ಮಾರ್ಟ್ ತರಗತಿಗಳನ್ನು ಅನುಷ್ಠಾನಗೊಳಿಸಲಾಗಿದೆ. ವಿವೇಕ ಶಾಲೆ ಯೋಜನೆಯಡಿ 14 ಕಾಮಗಾರಿಗಳ ಶಂಕುಸ್ಥಾಪನೆ, ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ 10 ಅಂಗನವಾಡಿಗಳ ಉದ್ಘಾಟನೆ ಹಾಗೂ ಇನ್ನೂ 11 ಅಂಗನವಾಡಿಗಳಿಗೆ ಶಂಕುಸ್ಥಾಪನೆ, ಈಗಾಗಲೇ ಪೂರ್ಣಗೊಂಡಿರುವ 300 ಆಶ್ರಯ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ, ನಿರ್ಮಿತಿ ಕೇಂದ್ರದ ವತಿಯಿಂದ ಕೈಗೊಳ್ಳಲಾಗಿರುವ 24 ಸಮುದಾಯ ಭವನಗಳ ಉದ್ಘಾಟನೆ ಹಾಗೂ ಪ್ರಾದೇಶಿಕ ಲಸಿಕಾ ಕೇಂದ್ರಕ್ಕೆ ಶಂಕುಸ್ಥಾಪನೆ ಸೇರಿದಂತೆ ಎಲ್ಲ ಪ್ರಮುಖ ಕಾಮಗಾರಿಗಳ ವಿವರಗಳನ್ನು ಒದಗಿಸಬೇಕು ಎಂದು ಹೇಳಿದರು.
ಎನ್‍ಇಎಸ್ ಮೈದಾನದಲ್ಲಿ ಸಭೆ
ಈಗಾಗಲೇ 300 ಆಶ್ರಯ ಮನೆಗಳು ಪೂರ್ಣಗೊಂಡಿದ್ದು, ಅದಕ್ಕೆ ನೀರು, ವಿದ್ಯುತ್ ಮತ್ತು ಒಳಚರಂಡಿ ಸಂಪರ್ಕಗಳನ್ನು ತಕ್ಷಣ ಕಲ್ಪಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ಒದಗಿಸಲು ಕ್ರಮ ಕೈಗೊಳ್ಳಬೇಕು. ಎನ್‍ಇಎಸ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಪಂ‌ ಸಿಇಒ ಎನ್.ಡಿ.ಪ್ರಕಾಶ್, ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

https://suddikanaja.com/2022/12/15/mp-by-raghavendra-raised-an-issue-of-arecanut-at-parliment-session/

error: Content is protected !!