ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಯುವ ಉದ್ಯಮಿ ಶರತ್ ಭೂಪಾಳಂ (sharat bhupalam) ಅವರ ಮನೆಯಲ್ಲಿ ಬೆಂಕಿ ಅವಘಡ (Fire accident) ಸಂಭವಿಸಿ ಅವರ ಸಾವಿಗೆ ಕಾರಣವಾಗಿದ್ದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಇನ್ನೂ ಹತ್ತು ದಿನಗಳಲ್ಲಿ ವರದಿ ನೀಡುವಂತೆ ಶಾಸಕ ಕೆ.ಎಸ್.ಈಶ್ವರಪ್ಪ (KS Eshwarappa) ಸೂಚನೆ ನೀಡಿದರು.
ಅಗ್ನಿಶಾಮಕ ದಳದ ಕಚೇರಿಗೆ ಭೇಟಿ ನೀಡಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದರು.
READ | ಶಿಮುಲ್ ವ್ಯಾಪ್ತಿಯ 3 ಜಿಲ್ಲೆಗಳಲ್ಲಿ ಹಾಲು ಖರೀದಿ ದರದಲ್ಲಿ ದಿಢೀರ್ ಏರಿಕೆ, ಎಂದಿನಿಂದ ಅನ್ವಯ?
ತನಿಖೆಗೆ ಸಮಿತಿ ರಚನೆ
ಶರತ್ ಭೂಪಾಳಂ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯ ಕಾರಣ ಎಂದು ಆರೋಪಿಸಿ ಬೆಂಬಲಿಗರು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ಹೀಗಾಗಿ, ಘಟನೆಯ ಬಗ್ಗೆ ತನಿಖೆ ನಡೆಸಲು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (additional SP) ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. 10 ದಿನಗಳಲ್ಲಿ ವರದಿ ನೀಡಲು ಸೂಚಿಸಲಾಗಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.
ಅಧಿಕಾರಿಗಳಿಂದ ಮಾಹಿತಿ ಸಂಗ್ರಹ
ಕೈಗಾರಿಕೋದ್ಯಮಿ ಶರತ್ ಭೂಪಾಳಂ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಅಲ್ಲಿ ಹಾಜರಾದ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಿ ಅವರಿಂದ ಸಂಪೂರ್ಣ ಮಾಹಿತಿ ಪಡೆದರು.
ವೈಫಲ್ಯ ಮುಚ್ಚಿ ಹಾಕಲು ನಾನು ಬಿಡುವುದಿಲ್ಲ ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳುವುದು ನಿಶ್ಚಿತ. ಯಾವುದೇ ಕಾರಣಕ್ಕೂ ಸತ್ಯವನ್ನು ಮುಚ್ಚಿಡಬೇಡಿ. ಇನ್ನು ಮುಂದೆ ಈ ರೀತಿಯ ಘಟನೆಗಳಿಗೆ ಆಸ್ಪದವಿಲ್ಲ ಎಂದು ಎಚ್ಚರಿಸಿದರು.
ಸಿಬ್ಬಂದಿಯ ಮೇಲಿರುವ ಆರೋಪಗಳೇನು?
“ಘಟನೆ ಸಂಭವಿಸಿದಾಗ ಅಗ್ನಿಶಾಮಕ ದಳದ ವಾಹನ ಬರಲು ತಡವಾಗಿದೆ. ಬ್ಯಾಟರಿ ಇರಲಿಲ್ಲ, ಬ್ಯಾಟರಿ, ಮಾಸ್ಕ್, ಉದ್ದವಾದ ಪೈಪ್, ಲೈಫ್ ಜಾಕೇಟ್, ಯಾವುದು ಕೂಡ ಮೊದಲ ವಾಹನದಲ್ಲಿ ಇರಲಿಲ್ಲ. ಎರಡನೇ ವಾಹನದಲ್ಲಿ ಎಲ್ಲವೂ ಇತ್ತು. ಸರಿಯಾಗಿ ಮಾಹಿತಿ ಇರುವ ಮತ್ತು ಲೀಡ್ ಮಾಡುವ ಸಿಬ್ಬಂದಿ ಕೂಡ ಇರಲಿಲ್ಲ ಎಂಬುದು ಸಂತ್ರಸ್ತರ ಆರೋಪವಿದೆ”. ನಿಮ್ಮ ತಪ್ಪನ್ನು ಸಮರ್ಥಿಸಿಕೊಳ್ಳಬೇಡಿ ಎಂದರು.
READ | ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನವೇ ವಿಮಾನ ನಿಲ್ದಾಣ ಲೋಕಾರ್ಪಣೆ, ವಿಮಾನ ನಿಲ್ದಾಣದ ವೈಶಿಷ್ಟ್ಯಗಳೇನು?
ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ, ಅಗ್ನಿಶಾಮಕ ದಳದ ಅಧಿಕಾರಿ ಅಶೋಕ್, ಸ್ಬೂಡಾ ಅಧ್ಯಕ್ಷ ಎನ್.ಜೆ.ನಾಗರಾಜ್, ಪಾಲಿಕೆ ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್, ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ, ಜಿಪಂ ಮಾಜಿ ಸದಸ್ಯ ಕೆ.ಈ.ಕಾಂತೇಶ್, ಬಿಜೆಪಿ ಪ್ರಮುಖ ಕೆ.ವಿ.ಅಣ್ಣಪ್ಪ, ಮುರುಳಿ ಉಪಸ್ಥಿತರಿದ್ದರು.