ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(-Visvesvaraya Iron and Steel Plant-ವಿಐಎಸ್.ಎಲ್)ಗೆ ಬಂಡವಾಳ ಹೂಡುವ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಲಾಗಿದೆ. ಶೀಘ್ರವೇ ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಮಿಕ ಮುಖಂಡರ ನಿಯೋಗದೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj bommai) ಅವರಿಗೆ ಭೇಟಿ ಮಾಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ (BY Raghavendra) ತಿಳಿಸಿದರು.
READ | ಶಿವಮೊಗ್ಗದ ವಿವಿಧ ಅಂಗಡಿಗಳ ಮೇಲೆ ಪೊಲೀಸರ ದಿಢೀರ್ ದಾಳಿ, 557 ಪ್ರಕರಣ ದಾಖಲು
ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಖಾನೆಗೆ ಬಂಡವಾಳ ಹೂಡಿ ಉತ್ಪಾದನೆಗೆ ಚಾಲನೆ ನೀಡಿದ್ದರೂ ಸಂಪೂರ್ಣವಾಗಿ ನಷ್ಟ ಉಂಟಾಗಿ ಉತ್ಪಾದನೆ ಸ್ಥಗಿತಗೊಳಿಸಲಾಯಿತು ಎಂದು ಹೇಳಿದರು.
ಕಾರ್ಖಾನೆ ಮುಚ್ಚುವ ಸ್ಥಿತಿಗೆ ಹೋಗುತ್ತಿದೆ ಎಂಬ ಕಾರಣಕ್ಕೆ ನೌಕರರು ಮತ್ತು ನಿವೃತ್ತ ನೌಕರರ ಮುಖಂಡರು ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಕೆಸರು ಎರಚಾಟಕ್ಕೆ ಅವಕಾಶ ನೀಡುವುದಿಲ್ಲ. ಕಾರ್ಖಾನೆಯ ಉಳಿವಿಗೆ ಸರ್ಕಾರದೊಂದಿಗೆ ಪತ್ರ ವ್ಯವಹಾರ ಹಾಗೂ ಸಭೆಗಳನ್ನು ನಡೆಸಲಾಗುವುದು.
– ಬಿ.ವೈ.ರಾಘವೇಂದ್ರ, ಸಂಸದ
ಕಾರ್ಮಿಕರು ಭಯ ಪಡುವ ಅಗತ್ಯವಿಲ್ಲ
ವಿಐಎಸ್.ಎಲ್ (VISL) ಕಾರ್ಖಾನೆ ಉಳಿವಿಗೆ ಪ್ರಯತ್ನಿಸಲಾಗುವುದು. ಅನೇಕ ವರ್ಷಗಳಿಂದ ವಿಐಎಸ್.ಎಲ್ ಮತ್ತು ಎಂಪಿಎಂ (MPM) ಬಗ್ಗೆ ಚರ್ಚೆ ನಡೆಯುತ್ತಿದೆ. ಮೈಸೂರು ಮಹಾರಾಜರು ಆರಂಭಿಸಿದ್ದ ಕಾರ್ಖಾನೆ ಮುಚ್ಚುವ ಸ್ಥಿತಿಗೆ ತಲುಪಿದೆ ಎಂದರು.
ಜಗತ್ತಿನಾದ್ಯಂತ ಆರ್ಥಿಕ ಪರಿಸ್ಥಿತಿ ಸ್ಥಿತಿ ಸರಿಯಿಲ್ಲ. ಇದು ಭಾರತಕ್ಕೆ ಹೊರತಾಗಿಲ್ಲ. ಹೀಗಾಗಿ, 2018-19ರಲ್ಲಿ 28 ಕಂಪನಿಗಳಿಂದ 85 ಸಾವಿರ ಕೋಟಿ ರೂ. ಮೌಲ್ಯದ ಸರ್ಕಾರದ ಷೇರನ್ನು ವಾಪಸ್ ಪಡೆಯಲಾಯಿತು. 2019-20ರಲ್ಲಿ 15 ಕಂಪನಿಗಳಿಂದ 15 ಸಾವಿರ ಕೋಟಿ, 2020-21ರಲ್ಲಿ 18 ಕಂಪನಿಗಳಿಂದ 32 ಸಾವಿರ ಕೋಟಿ ರೂ., 2021-22ರಲ್ಲಿ 10 ಕಂಪನಿಗಳಿಂದ 12,500 ಕೋಟಿ ರೂ., 2022-23ರಲ್ಲಿ 8 ಕಂಪನಿಗಳಿಂದ 38 ಸಾವಿರ ಕೋಟಿ ರೂ. ಮೌಲ್ಯದ ಷೇರುಗಳನ್ನು ಹಿಂಪಡೆಯಲಾಗಿದೆ. ದೇಶದಲ್ಲಿ ನಷ್ಟದಲ್ಲಿರುವ ಸುಮಾರು 80 ಕಾರ್ಖಾನೆಗಳನ್ನು ಸಹ ಮುಚ್ಚಲಾಗಿದೆ. ಇದಕ್ಕೆ ವಿಐಎಸ್.ಎಲ್ ಹೊರತಾಗಿಲ್ಲ ಎಂದು ತಿಳಿಸಿದರು.
ಮುಖಂಡರಾದ ಬಿ.ಕೆ.ಶ್ರೀನಾಥ್, ಎಸ್.ಎನ್.ಚನ್ನಬಸಪ್ಪ, ಶಿವರಾಜ್, ಧರ್ಮಪ್ರಸಾದ್, ರಮೇಶ್, ಚಂದ್ರಶೇಖರ್, ವಿನ್ಸೆಂಟ್ ರೋಡ್ರಿಗಸ್, ಕೆ.ವಿ.ಅಣ್ಣಪ್ಪ ಉಪಸ್ಥಿತರಿದ್ದರು.
Fruit flower exhibition | ಪುಷ್ಟದಲ್ಲಿ ಅರಳಿದ ಪುನೀತ್, ಶಿವಮೊಗ್ಗ ಏರ್ಪೋರ್ಟ್, ಇಲ್ಲಿಗೊಮ್ಮೆ ಭೇಟಿ ನೀಡಲೇಬೇಕು