ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಆಲ್ಕೋಳದಲ್ಲಿ ಮನೆಯ ಬೀಗವನ್ನು ಮೋಟಾರು ಕೆಳಗಿಟ್ಟು ಹೋಗಿದ್ದು ಅದನ್ನು ತೆಗೆದುಕೊಂಡು ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಶನಿವಾರ ಬಂಧಿಸಲಾಗಿದೆ.
ದಾವಣಗೆರೆಯ ಶ್ರೀರಾಮ ಬಡಾವಣೆ ನಿವಾಸಿ ಎ.ಆರ್.ರಾಹುಲ್ (26), ಬೊಮ್ಮನಕಟ್ಟೆಯ ಗಣೇಶ್ (28) ಎಂಬುವವರನ್ನು ಬಂಧಿಸಿದ್ದು, ಅವರ ಬಳಿಯಿಂದ ಅಂದಾಜು ₹1,09,250 ಮೌಲ್ಯದ 30 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು 100 ಗ್ರಾಂ ತೂಕದ ಬೆಳ್ಳಿಯ ಚೈನ್ ಅನ್ನು ವಶಕ್ಕೆ ಪಡೆಯಲಾಗಿದೆ.
READ | ವಿಐಎಸ್ಎಲ್ ಸೇರಿ ದೇಶದ 80 ಕಾರ್ಖಾನೆಗಳ ಷೇರು ವಾಪಸ್, ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು?
24 ಗಂಟೆಯಲ್ಲಿ ಆರೋಪಿಗಳ ಬಂಧನ
ಶುಕ್ರವಾರ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಲ್ಕೊಳ ಗ್ರಾಮದ ನಿವಾಸಿ ಮಾಣಿಕ್ಯಂ ಎಂಬುವವರು ತಮ್ಮ ಮನೆಗೆ ಬೀಗವನ್ನು ಹಾಕಿ, ಅದನ್ನು ಮನೆಯ ಆವರಣದಲ್ಲಿನ ನೀರಿನ ಮೋಟಾರ್ ಕೆಳಗೆ ಇಟ್ಟು ಹೋಗಿದ್ದರು ಎಂದು ತಿಳಿದುಬಂದಿದೆ.
ಆ ಬೀಗದ ಕೀಯನ್ನು ತೆಗೆದುಕೊಂಡು, ಮನೆಯ ಬಾಗಿಲನ್ನು ತೆರೆದು ಒಳಗೆ ಹೋಗಿ ಬೀರುವಿನಲ್ಲಿ ಇಟ್ಟಿದ್ದ ಬಂಗಾರದ ಆಭರಣಗಳು, ಬೆಳ್ಳಿಯ ಚೈನು ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಡಿವೈಎಸ್ಪಿ ಎಂ.ಸುರೇಶ್ ಮೇಲ್ವಿಚಾರಣೆಯಲ್ಲಿ ವಿನೋಬನಗರ ಸಿಪಿಐ ಎನ್.ಎಸ್.ರವಿ ನೇತೃತ್ವದಲ್ಲಿ ಎಎಸ್.ಐ ರಮೇಶ್, ಸಿಬ್ಬಂದಿ ಕೆ.ಆರ್.ರಾಜು, ಚಂದ್ರಾ ನಾಯ್ಕ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ಕೈಗೊಂಡಿದೆ.
https://suddikanaja.com/2023/01/26/fruit-flower-exhibition-at-shivamoggaa/