ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವೈಕುಂಠ ಏಕಾದಶಿ (vaikunta ekadasi 2023) ಪ್ರಯುಕ್ತ ನಗರದ ದೇವಸ್ಥಾನ(Temple)ಗಳಲ್ಲಿ ವಿಶಿಷ್ಟ ಪೂಜೆ, ಅಲಂಕಾರಗಳನ್ನು ಮಾಡಲಾಯಿತು. ದೇವಸ್ಥಾನಗಳಿಗೆ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದು ಕೃತಾರ್ಥರಾದರು.
ಸೋಮವಾರ ಬೆಳಗ್ಗೆಯಿಂದಲೇ ಭಕ್ತಾದಿಗಳು ಕ್ಯೂನಲ್ಲಿ ನಿಂತು ದೇವರ ದರ್ಶನ ಪಡೆದರು.
ಎಲ್ಲೆಲ್ಲಿ ಅಲಂಕಾರ?
ಗೌಡಸಾರಸ್ವತ ಸಮಾಜದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯ, ಕೋಟೆ ಶ್ರೀ ಸೀತಾರಾಮಾಂಜನೇಯ ದೇವಾಲಯ, ವೆಂಕಟೇಶ ನಗರದ ವೆಂಕಟರಮಣ, ಎಲ್ಬಿಎಸ್ ನಗರದ ದೇವಗಿರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯ, ನವುಲೆ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯ, ಹೊಳೆಹಟ್ಟಿ ಹಳೇ ಗ್ರಾಮದ ಶ್ರೀ ರಂಗನಾಥಸ್ವಾಮಿ, ಜಯನಗರ ರಾಮಮಂದಿರದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.
ದೇವಗಿರಿ ವೆಂಕಟರಮಣ ದೇವಾಲಯದಲ್ಲಿ ಸಪ್ತದ್ವಾರ ನಿರ್ಮಾಣ ಮಾಡಿ ಶೇಷ ಶಯನ ಲಕ್ಷ್ಮೀ ನಾರಾಯಣ ಅಲಂಕಾರ ಮಾಡಲಾಗಿತ್ತು. ಎಲ್ಲ ದೇವಸ್ಥಾನಗಳಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ವೈಕುಂಠ ಏಕಾದಶಿ ಆಚರಣೆ ಏಕೆ?
ವೈಕುಂಠ ಏಕಾದಶಿ ದಿನದಂದು ಭಕ್ತರ ಕೋರಿಕೆ ಈಡೇರಿಸಲು ಸಾಕ್ಷಾತ್ ವಿಷ್ಣುವೆ ಲಕ್ಷ್ಮೀ ಸಹಿತರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ನಂಬಿಕೆ ಇದೆ. ಹೀಗಾಗಿ, ಈ ದಿನ ಪ್ರಮುಖವಾಗಿದೆ.
ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ದ ಏಕಾದಶಿಯನ್ನು ವೈಕುಂಠ ಏಕಾದಶಿ ಎನ್ನುತ್ತಾರೆ. ಶ್ರದ್ದಾಭಕ್ತಿಗಳಿಂದ ಸನಾತನ ಧರ್ಮಿಗಳು ವಿಷ್ಣುವನ್ನು ಪೂಜಿಸುವ ಮಹತ್ವದ ದಿನ.
ಈ ದಿನ ಏಕಾದಶಿ ವ್ರತ ಕೈಗೊಂಡು ದೇವರ ದರ್ಶನ ಪಡೆದಲ್ಲಿ ಮೋಕ್ಷ ಪ್ರಾಪ್ತಿ ಎಂಬ ಪ್ರತೀತಿಯೂ ಇದೆ.
https://suddikanaja.com/2023/01/01/sri-balaji-photo-studio-movie-release/