ಸುದ್ದಿ ಕಣಜ.ಕಾಂ ಭದ್ರಾವತಿ
BHADRAVATHI: “ಕಮಲ ಕೆರೆಯಲ್ಲಿದ್ದರೆ ಚೆನ್ನ, ತೆನೆ ಹೊಲದಲ್ಲಿದ್ದರೆ ಚೆನ್ನ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಅದಕ್ಕಾಗಿ ರಾಜ್ಯದಲ್ಲಿ ಬದಲಾವಣೆ ಮಾಡಬೇಕು” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನವಿ ಮಾಡಿದರು.
ಭದ್ರಾವತಿಯಲ್ಲಿ ಆಯೋಜಿಸಿದ್ದ ‘ಪ್ರಜಾಧ್ವನಿ’ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಪಂಚಿಂಗ್ ಡೈಲಾಗ್ ಮೂಲಕ ಮನಸೂರೆಗೊಂಡರು.
ಭದ್ರಾವತಿಯ ಜನ ಸಂಗಮೇಶ್ ಅವರನ್ನು ಕಳೆದ ಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ. ಕಳೆದ ಬಾರಿ ನಮ್ಮ ಸರ್ಕಾರ ಉತ್ತಮ ಆಡಳಿತ ನೀಡಿದ್ದರೂ, ಜನ ನಮ್ಮ ಮೇಲೆ ವಿಶ್ವಾಸ ಇಡದೆ ಕೇವಲ 80 ಸ್ಥಾನ ನೀಡಿದರು. ಜೆಡಿಎಸ್ನವರು 38 ಸೀಟು ಗೆದ್ದಿದ್ದರು. ಆದರೂ ನಾವು ಕುಮಾರಸ್ವಾಮಿ ಅವರಿಗೆ ಸರ್ಕಾರ ನಡೆಸಲು ಬೆಂಬಲ ನೀಡಿದ್ದೇವು. ಅವರು ಸರ್ಕಾರ ಉಳಿಸಿಕೊಳ್ಳಲು ಆಗಲಿಲ್ಲ. ಅವರ ಹೇಳಿಕೆ ಬಗ್ಗೆ ನಾನು ಚರ್ಚಿಸುವುದಿಲ್ಲ. ರಾಜ್ಯದಲ್ಲಿ ಜನತಾ ದಳ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದರು.
READ | ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಕಾರ್ಮಿಕರ ಅಳಲು ಆಲಿಸಿದ ಡಿಕೆಶಿ, ಪುನರಾರಂಭದ ಬಗ್ಗೆ ಹೇಳಿದ್ದೇನು?
ಭದ್ರಾವತಿ ಜನರೊಂದಿಗೆ ನಾವಿದ್ದೇವೆ
ರಾಜ್ಯದ ಜನರ ಸಮಸ್ಯೆಗೆ ಸ್ಪಂದಿಸಲು ಈ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡಿದ್ದೇವೆ. ಬೆಳಗಾವಿಯಿಂದ ಆರಂಭಿಸಿ ರಾಜ್ಯದುದ್ದಗಲ ನಾವು ಪ್ರವಾಸ ಮಾಡಿದ್ದೇವೆ. ನಾವು ಇಲ್ಲಿ ನಿಮ್ಮ ಜೈಕಾರ, ಹೂವಿನ ಹಾರಕ್ಕೆ ನಾನಿಲ್ಲಿಗೆ ಬಂದಿಲ್ಲ. ಭದ್ರಾವತಿಯ ಜನರ ಜತೆ ನಾವಿದ್ದೇವೆ, ಅವರ ಕೈ ಬಲಪಡಿಸುತ್ತೇವೆ ಎಂದು ಹೇಳಲು ಬಂದಿದ್ದೇವೆ ಎಂದು ತಿಳಿಸಿದರು.
ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಶಾಸಕ ಬಿ.ಕೆ ಸಂಗಮೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ಹ್ಯಾರಿಸ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಮುಖಂಡರಾದ ಆರ್.ಎಂ ಮಂಜುನಾಥ ಗೌಡ ಉಪಸ್ಥಿತರಿದ್ದರು.