ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸೊರಬ (sorab) ತಾಲ್ಲೂಕು ಕುಪ್ಪಗಡ್ಡೆ ತಾಳಗುಪ್ಪ ಗ್ರಾಮದ ಸರ್ವೆ ನಂ.20ರಲ್ಲಿ 40 ವರ್ಷದ ಸಾವಿರಾರು ಅಡಿಕೆ ಮರ(arecanut tree)ಗಳನ್ನು ಯಂತ್ರದ ಮೂಲಕ ನಾಶ ಮಾಡಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
6 ಕುಟುಂಬಗಳು ಸಾಗುವಳಿ ಮಾಡಿದ್ದ ತೋಟದಲ್ಲಿನ ಮರಗಳನ್ನು ಅರಣ್ಯಾಧಿಕಾರಿಗಳು ನಾಶ ಮಾಡಿದ್ದು, ಇದರಿಂದ ಕುಟುಂಬಗಳು ಬೀದಿಗೆ ಬಿದ್ದಿವೆ. ಸಾಗುವಳಿದಾರರು ಎಷ್ಟೇ ಗೋಗರೆದರೂ ಪ್ರಯೋಜನವಾಗಿಲ್ಲ ಎಂದು ಹೇಳಲಾಗಿದೆ.
READ | ಶಾಸಕ ಕೆ.ಎಸ್.ಈಶ್ವರಪ್ಪ ವಿರುದ್ಧ ರೆಬಲ್ ಆದ ಆಯನೂರು ಮಂಜುನಾಥ್, ಫ್ಲೆಕ್ಸ್ ಮೂಲಕ ತೀಕ್ಷ್ಣ ಟೀಕೆ
ಕಾಂಗ್ರೆಸ್(congress)ನಿಂದ ತೀವ್ರ ವಿರೋಧ
ಒಕ್ಕಲೆಬ್ಬಿಸಿ ಸುಮಾರು 20 ಎಕರೆ ಫಸಲು ಬಂದ ತೋಟ(farm)ವನ್ನು ನಾಶ ಮಾಡಿ ಸುತ್ತಲೂ ಟ್ರಂಚ್ ಹಾಕಿ ಅರಣ್ಯ ಭೂಮಿಯೆಂದು ಘೋಷಣೆ ಮಾಡಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಸಂಯೋಜಕ ಬಿ.ಎ.ರಮೇಶ್ ಹೆಗ್ಡೆ (Ramesh Hegde) ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಭೂಮಿ ಸಾಗುವಳಿದಾರರಿಗೆ ಒಕ್ಕಲೆಬ್ಬಿಸುವುದಿಲ್ಲ ಎಂದು ಕಳೆದ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಭರವಸೆ ನೀಡಿತ್ತು. ಆದರೂ ಬಡ ರೈತ ಕುಟುಂಬಗಳನ್ನು ಒಕ್ಕಲೆಬ್ಬಿಸಲಾಗಿದೆ ಎಂದು ಆರೋಪಿಸಿದರು.
ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದು, ಇವರ ಹೆಸರಿನಲ್ಲಿ ದಾಖಲೆಗಳೂ ಇವೆ. ಸಾಗುವಳಿದಾರರನ್ನು ಒಕ್ಕಲೆಬ್ಬಿಸದಂತೆ ಸುಮಾರು ಕಾಯ್ದೆಗಳು ಜೀವಂತವಾಗಿವೆ. ಅದರಲ್ಲಿ 1963ರ ಕಾಯ್ದೆ ಪ್ರಕಾರ ಇಬ್ಬರು ರೈತರನ್ನು ಒಕ್ಕಲೆಬ್ಬಿಸುವ ಹಾಗೆಯೇ ಇಲ್ಲ. ಇನ್ನುಳಿದ ನಾಲ್ಕು ರೈತರು ಅರ್ಜಿ ಹಾಕಿಕೊಂಡು ಕಾಯುತ್ತಿದ್ದಾರೆ. ಇವರ ಜೊತೆಗೆ 80 ಸಾವಿರ ಅರ್ಜಿಗಳಿವೆ. ಅವರೆಲ್ಲರನ್ನೂ ಬಿಟ್ಟು ಇವರಿಗೆ ಮಾತ್ರ ನೋಟೀಸ್ ನೀಡಿದ್ದಾರೆ ಹಾಗೂ ನಿನ್ನೆ ಪೊಲೀಸ್ ಭದ್ರತೆ ಹಾಗೂ ಯಂತ್ರೋಪಕರಣಗಳನ್ನು ಬಳಸಿ ಫಸಲಿರುವ 20 ಎಕರೆ ತೋಟವನ್ನು ನಾಶ ಮಾಡಿ ಈ ಕುಟುಂಬಗಳನ್ನು ಬೀದಿಗೆ ತಂದಿದ್ಧಾರೆ ಎಂದು ದೂರಿದರು.
ಈ ಹಿಂದೆಯೂ 41 ರೈತರ ಒಕ್ಕಲು
ಈ ಹಿಂದೆಯೂ ಸುಮಾರು 41 ರೈತರನ್ನು ಒಕ್ಕಲೆಬ್ಬಿಸಿದ್ದರು. 110ಕ್ಕೂ ಹೆಚ್ಚು ಕೇಸ್ಗಳನ್ನು ಅರಣ್ಯ ಅಧಿಕಾರಿಗಳು ದಾಖಲಿಸಿದ್ದರು. ಸರ್ಕಾರದ ಮಾತನ್ನೇ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ನನ್ನ ಜೀವ ಇರುವತನಕ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಶಪಥ ಮಾಡಿದ್ದರು. ಆದರೆ, ಆ ಶಪಥ ಈಗ ಸುಳ್ಳಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್, ಪ್ರಮುಖರಾದ ಧರ್ಮರಾಜ್, ವಿಜಯ್ಕುಮಾರ್, ಸಿ.ಎಸ್.ಚಂದ್ರಭೂಪಾಲ್, ಗಣಪತಿ, ಎಂ.ಡಿ.ಶೇಖರ್, ಭೀಮಪ್ಪ ಉಪಸ್ಥಿತರಿದ್ದರು.
Shivamogga Jail | ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಿಢೀರ್ ದಾಳಿ