ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೇಂದ್ರ ಚುನಾವಣೆ ಆಯೋಗ(election commision)ವು ಮಾ.29ರಂದು ಬೆಳಗ್ಗೆ11.30ಕ್ಕೆ ಮಾಧ್ಯಮಗೋಷ್ಠಿಯನ್ನು ಕರೆದಿದ್ದು, ಇಂದೇ ಚುನಾವಣೆ ಘೋಷಣೆ ಮತ್ತು ನೀತಿ ಸಂಹಿತೆ ಘೋಷಣೆ ಸಾಧ್ಯತೆ ಇದೆ.
READ | ಭದ್ರಾವತಿಯ ಮೂವರು ರೌಡಿಶೀಟರ್’ಗಳ ಗಡಿಪಾರು ಆದೇಶ, ಕಾರಣವೇನು?
ಸಿಎಂ ಟಿಪಿ ರದ್ದು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೂ ರದ್ದು ಪಡಿಸಲಾಗಿದೆ.
ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಸಹ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳ್ಳಂಬೆಳಗ್ಗೆ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚರ್ಚಿಸಲು ಸಭೆಯನ್ನು ನಡೆಸಿದರು.
ಚುನಾವಣೆ ಪ್ರಚಾರದ ಕಾವು
ಈಗಾಗಲೇ ಜಿಲ್ಲೆಯಲ್ಲಿ ಚುನಾವಣೆ ಪ್ರಚಾರದ ಕಾವು ತಾರಕಕ್ಕೇರಿದ್ದು, ಘೋಷಣೆಯಾದ ಅಭ್ಯರ್ಥಿಗಳು ಹಾಗೂ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿ, ಜೆಡಿಎಸ್ ಪಕ್ಷ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
Assembly Election | ಶಿವಮೊಗ್ಗದಲ್ಲಿ ಯುವ ಮತದಾರರ ಸೆಳೆಯಲು ಮಾಸ್ಟರ್ ಪ್ಲ್ಯಾನ್