
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾ.17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುಗಣಿಯ ಸಮಾರಂಭದಲ್ಲಿ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ಘಟಕ ಮತ್ತು ನೂತನ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲು ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲೂಕಿನ ಸಾರ್ವಜನಿಕರು ಆಗಮಿಸಲು ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 125 ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.
READ | ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ, ಯಾವ್ಯಾವ ಕಾರ್ಯಕ್ರಮಗಳಲ್ಲಿ ಭಾಗಿ?
ಆದ್ದರಿಂದ ಅಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿದ್ದಾರೆ.