ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪತ್ನಿಯ ಆತ್ಮಹತ್ಯೆಗೆ ಕಾರಣನಾದ ಪತಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ನೆಹರೂ ನಗರದ ನಿವಾಸಿ ವೆಂಕಟೇಶ್ ಅಲಿಯಾಸ್ ಬುಡ್ಡ(38) ಈತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹25,000 ದಂಡ ಮತ್ತು ದಂಡ ಪಾವತಿಸಲು ವಿಫಲನಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.
READ | ಶಿವಮೊಗ್ಗದಲ್ಲಿ ಎಚ್ಇಓ ಹುದ್ದೆ ನೇಮಕಾತಿಗೆ ನಡೆಯಲಿದೆ ನೇರ ಸಂದರ್ಶನ
2020ರಲ್ಲಿ ಮಹಿಳೆ ಆತ್ಮಹತ್ಯೆ
ಭದ್ರಾವತಿ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಹರೂ ನಗರದ ವಾಸಿ 30 ವರ್ಷದ ಮಹಿಳೆಗೆ ಆಕೆಯ ಗಂಡ ವೆಂಕಟೇಶನು ಮದುವೆಯಾದಾಗಿನಿಂದ ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ. ಮಹಿಳೆಯು ಇದೇ ವಿಚಾರವನ್ನು ಮನಸ್ಸಿಗೆ ಹಚ್ಚಿಕೊಂಡು 2020ರ ಮೇ 27ರಂದು ತನ್ನ 8 ವರ್ಷದ ಮತ್ತು 5 ವರ್ಷದ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಭದ್ರಾ ಚಾನಲ್ ಗೆ ಹಾರಿ ಆತ್ಮ ಹತ್ಯೆ ಮಾಡಿಕೊಂಡಿದ್ದರು. ಮೃತೆಯ ಸಹೋದರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿತ್ತು.
4ನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ ಪೀಠಾಸೀನ ಭದ್ರಾವತಿಯಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಧೀಶ ಆರ್. ವೈ. ಶಶಿಧರ್ ಅವರು ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕಿ ರತ್ನಮ್ಮ ವಾದ ಮಂಡಿಸಿದ್ದರು.