ಸುದ್ದಿ ಕಣಜ.ಕಾಂ ಶಿಕಾರಿಪುರ
SHIKARIPURA: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ಮನೆಯ ಮೇಲೆ ಕಲ್ಲು ತೂರಾಟ ಮಾಡಿದ ಘಟನೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕಲಂ 144 ವಿಧಿಸಿರುವ ಬಗ್ಗೆ ಸುಳ್ಳು ಸಂದೇಶ ಹರಡಲಾಗುತ್ತಿದೆ. ಅದನ್ನು ನಂಬಬೇಡಿ. ಇದುವರೆಗೆ, ಕಲಂ 144 ಜಾರಿಗೊಳಿಸಿಲ್ಲ ಎಂದು ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ತಿಳಿಸಿದ್ದಾರೆ.
ಯಾರೂ ಭಯಪಡುವ ಅಗತ್ಯವಿಲ್ಲ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.