ಸುದ್ದಿ ಕಣಜ.ಕಾಂ ಶಿಕಾರಿಪುರ
SHIKARIPURA: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲು ತಣುರಾಟ ಮಾಡಿದ್ದು, ಕೆಲ ಹೊತ್ತು ಉದ್ರಿಕ್ತ ಸ್ಥಿತಿ ನಿರ್ಮಾಣವಾಗಿತ್ತು. ಪಟ್ಟಣದಲ್ಲಿ ಹಾಕಲಾಗಿದ್ದ ಬಿಜೆಪಿಯ ಫ್ಲೆಕ್ಸ್ ಗಳನ್ನು ಸಹ ತೆರವುಗೊಳಿಸಲಾಗಿದೆ.
READ | ಅಗ್ನಿವೀರ್ ವಾಯು ಹುದ್ದೆಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಲು ಅವಕಾಶ?
ನಡೆದಿದ್ದೇನು?
ಮೀಸಲಾತಿ ಕಡಿತ ಮಾಡಿದ್ದನ್ನು ಖಂಡಿಸಿ ಬಂಜಾರ ಸಮಾಜ ಸೇರಿದಂತೆ ಇನ್ನಿತರ ಸಂಘಟನೆಯವರು ಪ್ರತಿಭಟನೆ ನಡೆಸುತ್ತಿದ್ದರು. ಆಗ ಏಕಾಏಕಿ ಕಲ್ಲು ತೂರಾಟ ಮಾಡಲಾಗಿದೆ. ಟೈಯರ್ ಗೆ ಬೆಂಕಿ ಇಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಕಾರಿಪುರ ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಈ ವೇಳೆ ಬಿಎಸ್.ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ.
ಭುಗಿಲೆದ್ದ ಆಕ್ರೋಶ, ಕಲ್ಲು ತೂರಾಟ
ಮೀಸಲಾತಿ ಕಡಿತಕ್ಕೆ ಆಕ್ರೋಶಗೊಂಡ ಪ್ರತಿಭಟನಾಕಾರರು ಶಿಕಾರಿಪುರ ಪಟ್ಟಣದ ಮಿನಿ ವಿಧಾನಸೌಧ, ಬದ್ ನಿಲ್ದಾಣ ಸೇರಿದಂತೆ ಹಲವೆಡೆ ಅಳವಡಿಸಿದ್ದ ಬಿಜೆಪಿಯ ಫ್ಲೆಕ್ಸ್ ಗಳನ್ನು ಹರಿದುಹಾಕಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಶಿಕಾರಿಪುರದಲ್ಲಿರುವ ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಕಿಟಕಿಯ ಗಾಜು ಪುಡಿಯಾಗಿವೆ. ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ಪ್ರಸ್ತುತ ಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿದುಬಂದಿದೆ.
ಜೈಲು ರಸ್ತೆ ತಡೆದು ಸ್ಮಾರ್ಟ್ ಸಿಟಿ ವಿರುದ್ಧ ಆಕ್ರೋಶ, ಟಾಪ್ 6 ಬೇಡಿಕೆ ಇಲ್ಲಿವೆ