ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಬಿಜೆಪಿ ಶಾಸಕರಾದ ಕೆ.ಎಸ್.ಈಶ್ವರಪ್ಪ ಹಾಗೂ ಆಯನೂರು ಮಂಜುನಾಥ್ ಇಬ್ಬರ ನಡುವೆ ಮತ್ತೆ ಮಾತಿನ ಚಕಮಕಿಯಾಗಿದೆ.
ಆಯನೂರು ಹೇಳಿದ್ದೇನು?
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ತಮ್ಮ ನೂತನ ಕಚೇರಿ ಉದ್ಘಾಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, “ನಾನು ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಪಕ್ಕಾ. ಬಿಜೆಪಿಯ ಪಟ್ಟಿ ಪ್ರಕಟವಾದ ನಂತರ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ. ಶಿವಮೊಗ್ಗದಲ್ಲಿ ಶಾಂತಿ ನೆಲೆಸಬೇಕೆನ್ನುವುದೇ ನನ್ನ ಮೂಲ ಉದ್ದೇಶ. ಶಿವಮೊಗ್ಗಗ ನಗರ ಕ್ಷೇತ್ರದಿಂದ ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅಥವಾ ಅವರ ಪುತ್ರ ಕಾಂತೇಶ್ ಅಥವಾ ಅವರ ಕೈಗೊಂಬೆಯಂತಿರುವವರು ಸ್ಪರ್ಧಿಸಲಿ ಅವರ ವಿರುದ್ಧ ನಾನೂ ಕಣಕ್ಕಳಿಯುವೆ” ಎಂದರು.
READ | ನಟ ಕಿಚ್ಚು ಸುದೀಪ್ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು, ಆಯೋಗ ಹೇಳಿದ್ದೇನು?
ಈಶ್ವರಪ್ಪ ಹೇಳಿದ್ದೇನು?
“ಆಯನೂರು ಮಂಜುನಾಥ್ ಟೀಕೆಗಳಿಗೆ ನಾನು ಯಾವುದೇ ಕಾರಣಕ್ಕೂ ತಲೆ ಕೆಡಿಸಿಕೊಳ್ಳ. ನಾನು ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತ. ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ” ಎಂದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಿವಿಧ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮದ ನಂತರ ಅವರು ಮಾತನಾಡಿ, ಯಾವಾಗಲೂ ಸ್ಪರ್ಧೆಯು ಫ್ರೆಂಡ್ಲಿ ಫೈಟ್ ಆಗಬೇಕು. ಇದು ಬಿಜೆಪಿಯ ಅಪೇಕ್ಷೆ ಸಹ ಆಗಿದೆ. ಟಿಕೆಟ್ ಸಿಕ್ಕಿಲ್ಲ ಎಂಬ ಒಂದೇ ಕಾರಣಕ್ಕೆ ಬೇರೆ ಪಕ್ಷಕ್ಕೆ ಹೋಗುವವರು ನಿಜವಾದ ಬಿಜೆಪಿ ಕಾರ್ಯಕರ್ತರೇ ಅಲ್ಲ ಎಂದು ಕುಟುಕಿದರು.