ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddramaiah) ಅವರಿಗೆ ಟೀಕೆ ಮಾಡುವ ಭರದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ (KS Eshwarappa) ಅವರು ‘ಅಲೆಮಾರಿ’ ಎಂಬ ಪದಬಳಕೆ ಮಾಡಿದ್ದು, ಅದಕ್ಕೆ ಕಾಂಗ್ರೆಸ್ ಮುಖಂಡರು ಖಂಡಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ (KB Prasanna Kumar), ಒಂದು ಕ್ಷೇತ್ರದಿಂದ ಮತ್ತೊಂದು ಕ್ಷೇತ್ರದಲ್ಲಿ ಪ್ರತಿನಿಧಿಸಲುಮುಂದಾವುತ್ತಿದ್ದಾರೆ. ಅವರೊಬ್ಬ ಅಲೆಮಾರಿ ಎಂದಿದ್ದರು. ಈ ಮೂಲಕ ಈ ಜನಾಂಗಕ್ಕೆ ಅಪಮಾನ ಮಾಡಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್ ಮಾತನಾಡಿ, ಕೆ.ಎಸ್ ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರನ್ನು ಟೀಕಿಸುವ ಮೂಲಕ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಹೊರಟಿದ್ದಾರೆ ಎಂದು ಟೀಕಿಸಿದರು.
READ | ಚಾಕುದಿಂದ ಚುಚ್ಚಿ ಹಲ್ಲೆ, 5 ಜನರಿಗೆ ಶಿಕ್ಷೆ ವಿಧಿಸಿದ ಶಿವಮೊಗ್ಗ ನ್ಯಾಯಾಲಯ
ಸಿದ್ದರಾಮಯ್ಯ ಅವರನ್ನು ಅಲೆಮಾರಿಗಳಿಗೆ ಹೋಲಿಸುವ ಮೂಲಕ ಅಲೆಮಾರಿ ಸಮುದಾಯವನ್ನು ಅಪಮಾನಿಸಿದ್ದಾರೆ. ಈಶ್ವರಪ್ಪನವರಿಗೆ ಅವರ ಪಕ್ಷದಲ್ಲೇ ಟಿಕೆಟ್ ಸಿಗುವ ಖಾತರಿ ಇಲ್ಲ. ಅವರ ಪಕ್ಷದಲ್ಲೆ ವಿರೋಧಿಗಳಿದ್ದಾರೆ. ಅದನ್ನು ಸಹಿಸಿಕೊಳ್ಳಲಾಗದೆ ಸಿದ್ದರಾಮಯ್ಯ ಅವರನ್ನು ಟೀಕಿಸುವ ಮೂಲಕ ಟಿಕೆಟ್ ಪಡೆಯುವ ಪ್ರಯತ್ನ ನಡೆಸಿದ್ದಾರೆ ಎಂದರು.
ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಆಯನೂರು ಮಂಜುನಾಥ್ ಕಾಂಗ್ರೇಸ್ ಸೇರ್ಪಡೆ ಬಗ್ಗೆ ಜಿಲ್ಲಾ ಸಮಿತಿಯ ಜೊತೆ ಪಕ್ಷದ ರಾಜ್ಯ ನಾಯಕರು ಯಾವುದೇ ರೀತಿ ಚರ್ಚೆ ನಡೆಸಿಲ್ಲ. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಮುಖ್ಯ ಅಯನೂರು ಮಂಜುನಾಥ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಬಂದರೂ ಸ್ವಾಗತಿಸುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯ ಸಂಚಾಲಕ ಎಸ್.ಪಿ. ದಿನೇಶ್, ಓಬಿಸಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಶಿವಿಶ್ವನಾಥ್, ಉತ್ತರ ಬ್ಲಾಕ್ ಅಧ್ಯಕ್ಷ ದೀಪಕ್ ಸಿಂಗ್, ಆಸೀಫ್ ಉಪಸ್ಥಿತರಿದ್ದರು.
SSLC Exams | ತಂದೆಯ ಸಾವಾದರೂ ಪರೀಕ್ಷೆ ಬರೆದ ವಿದ್ಯಾರ್ಥಿನಿ, ಇದು ಹೃದಯ ಕಲಕುವ ಘಟನೆ