ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಕಾಂಗ್ರೆಸ್ ಭವನದಲ್ಲಿ ಕರೆದಿದ್ದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಆರ್.ಎಂ.ಮಂಜುನಾಥ್ಗೌಡ ಹಾಗೂ ಕಿಮ್ಮನೆ ರತ್ನಾಕರ್ ಮುನಿಸು ಮರೆತು ಹೊಂದಾಣಿಕೆ ಮಾಡಿಕೊಂಡಿರುವುದರ ಹಿಂದಿನ ಕಾರಣವನ್ನು ಹಂಚಿಕೊಂಡಿದ್ದಾರೆ.
READ | ಆನೆ ದಾಳಿಗೆ ಒಳಗಾಗಿದ್ದ ಡಾ.ವಿನಯ್ ಝಿರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್
ಆರ್.ಎಂ.ಎಂ. ಹೇಳಿದ್ದೇನು?
“ನಾವಿಬ್ಬರೂ ಒಂದಾಗಬೇಕು ಎಂಬುದು ತೀರ್ಥಹಳ್ಳಿ ಕ್ಷೇತ್ರದ ಜನರ ಭಾವನೆಯಾಗಿತ್ತು. ಜನಶಕ್ತಿಗಿಂತ ದೊಡ್ಡವರಿಲ್ಲ. ಜನರ ಭಾವನೆಗಳಿಗೆ ತಲೆ ಬಾಗಿ ಒಂದಾಗಿ ಹೋಗಲು ನಿರ್ಧರಿಸಿದ್ದೇವೆ” ಎಂದು ಆರ್.ಎಂ.ಮಂಜುನಾಥ್ ಗೌಡ ತಿಳಿಸಿದರು.
ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕಿಮ್ಮನೆ ರತ್ನಾಕರ್ ಅವರನ್ನು ಗೆಲ್ಲಿಸುವ ತೀರ್ಮಾನ ಮಾಡಿದ್ದೇನೆ. ಅದಕ್ಕಾಗಿ, ಶ್ರಮ ವಹಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಬಿಜೆಪಿಯ ಸುಳ್ಳಿನ ವ್ಯಾಪಾರವನ್ನು ಕೊನೆಗಾಣಿಸಬೇಕಿದೆ. ಅದಕ್ಕಾಗಿ ಇಬ್ಬರೂ ಒಂದಾಗಿದ್ದೇವೆ. ಕೆಳಹಂತದಲ್ಲೂ ಕಾರ್ಯಕರ್ತರು ಒಂದಾಗಿದ್ದಾರೆ ಎಂದರು.
ಕಿಮ್ಮನೆ ಹೇಳಿದ್ದೇನು?
ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಮಾತನಾಡಿ, ತೀರ್ಥಹಳ್ಳಿ ಕ್ಷೇತ್ರದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಕೋಮುಗಲಭೆ ನಡೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಿದರು.
ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಗೆಲ್ಲುವ ವಾತಾವರಣವಿದೆ. ಮತದಾರರು ಸಹ ಹಣಬಲದ ರಾಜಕಾರಣಕ್ಕೆ ಬೇಸತ್ತಿದ್ದಾರೆ. ಈ ಬಾರಿ ಆರಗ ಅವರನ್ನು ತಿರಸ್ಕರಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ಮಾಧ್ಯಮಗೋಷ್ಠಿಯಲ್ಲಿ ತೀರ್ಥಹಳ್ಳಿ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಕಲಗೋಡು ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಂದ್ರಭೂಪಾಲ್ ಇದ್ದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ರೆಬಲ್, ಮಾಡಿದ ಆರೋಪಗಳೇನು ಗೊತ್ತಾ?