ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ(Mallikarjun Kharge) ಅವರನ್ನು ನಾವು ತಂದೆ ಸ್ವರೂಪದಲ್ಲಿ ನೋಡುತ್ತಿದ್ದೇವು. ಕಾಂಗ್ರೆಸ್ ಹಿರೋ ಎಂದೇ ಭಾವಿಸಿದ್ದೇವು. ಆದರೆ, ಮೋದಿಯವರನ್ನು ವಿಷ ಸರ್ಪಕ್ಕೆ ಹೋಲಿಸುವಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆಂದುಕೊಂಡಿರಲಿಲ್ಲ ಎಂದು ಶಾಸಕ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು.
ಮೇ 3ರಂದು ಸಂಜೆ 5 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿವಮೊಗ್ಗದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮೇ 7ರಂದು ಆಯನೂರಿನಲ್ಲಿ ಜಿಲ್ಲೆಯ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ. ಏ.30ರಂದು ಬೆಳಗ್ಗೆ 10.30ಕ್ಕೆ ಪೇಸ್ ಕಾಲೇಜಿನ ಹಿಂಭಾಗದಲ್ಲಿರುವ ಜಯಲಕ್ಷ್ಮೀ ಕನ್ವೆನ್ಷನ್ ಹಾಲ್ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ಜೀ ಅವರು ವಿವಿಧ ಸಮುದಾಯಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
– ಕೆ.ಎಸ್.ಈಶ್ವರಪ್ಪ, ಶಾಸಕ
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಲೂ ನನಗೆ ಖರ್ಗೆ ಅವರು ಪ್ರಧಾನಿ ಮೋದಿ ಬಗ್ಗೆ ಆ ರೀತಿ ಹೇಳಿಕೆ ನೀಡಿದ್ದಾರೆಯೇ? ಎಂಬ ಅನುಮಾನ ಕಾಡುತ್ತಿದೆ. ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಖರ್ಗೆ ಅವರಿಗೆ ಒಂದು ತೂಕವಿತ್ತು. ಆದರೆ ಇಡೀ ವಿಶ್ವವೇ ಮೆಚ್ಚಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಕೆ ಮಾಡುವ ಮೂಲಕ ಅವರೇ ಅದನ್ನು ಮಣ್ಣುಪಾಲು ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
READ | ಭಾರತದಲ್ಲೇ ತಯಾರಾಗಲಿವೆ ಮೊಬೈಲ್, ‘ಆ್ಯಪಲ್’ ಉತ್ಪಾದನೆ ಈಗಾಗಲೇ ಆರಂಭ
ನಾನು ಮುಸ್ಲಿಂ ವಿರೋಧಿಯಲ್ಲ
ರಾಷ್ಟ್ರೀಯವಾದಿ ಮುಸ್ಲಿಮರು ನಮ್ಮೊಂದಿಗೆ ಇದ್ದಾರೆ. ಬಿಜೆಪಿಗೆ ಮತ ನೀಡುತ್ತಾರೆ. ನಾನು ಎಂದಿಗೂ ಮುಸ್ಲಿಂ ವಿರೋಧಿಯಲ್ಲ. ಆದರೆ ದೇಹದ್ರೋಹಿ, ಪಾಕಿಸ್ತಾನದ ಪರವಾಗಿರುವ ಮುಸ್ಲಿಮರ ವಿರೋಧಿ ನಾನು ಎಂದು ಹೇಳಿದರು.
60 ಸಾವಿರ ಅಂತರದಿಂದ ಚೆನ್ನಿ ಗೆಲುವು
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ ಅವರಿಗೆ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿರುವುದರಿಂದ ಕಳೆದ ಬಾರಿಗಿಂತ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಕಳೆದ ಬಾರಿ 46 ಸಾವಿರಕ್ಕೂ ಹೆಚ್ಚು ಮತಗಳಿಂದ ನಾನು ಗೆಲುವು ಸಾಧಿಸಿದ್ದೆ. ಈ ಬಾರಿ ಅವರು 60 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸುತ್ತಾರೆಂಬ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ ನಗರ ಘಟಕದ ಅಧ್ಯಕ್ಷ ಜಗದೀಶ್, ಸಂತೋಷ್ ಬಳ್ಳೆಕೆರೆ, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ, ಮಂಜುನಾಥ್ ಇನ್ನಿತರರು ಉಪಸ್ಥಿತರಿದ್ದರು.