ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.
ಜಿಲ್ಲಾಧಿಕಾರಿ ನೀಡಿರುವ ಸೂಚನೆ ಏನು?
ಚುನಾವಣಾ ನೀತಿ ಸಂಹಿತೆ ಅನುಷ್ಠಾನಕ್ಕಾಗಿ ಸರ್ಕಾರಿ ಅಧಿಕಾರಿ/ ಸಿಬ್ಬಂದಿ ವರ್ಗದವರ ಹೆಚ್ಚಿನ ಅವಶ್ಯಕತೆ ಇರುವುದರಿಂದ ಜಿಲ್ಲೆಯ ಎಲ್ಲ ಸರ್ಕಾರಿ ಸಿಬ್ಬಂದಿ ಹಾಗೂ ಶಿಕ್ಷಕ ವರ್ಗದವರು ತಮ್ಮ ಇಲಾಖಾ ಮುಖ್ಯಸ್ಥರ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಡದೇ ಇರುವಂತೆ ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲ ಇಲಾಖಾ ಮುಖ್ಯಸ್ಥರುಗಳಿಗೆ ಸೂಚಿಸಿದ್ದಾರೆ.
READ | ಗನ್ ಹಿಂಭಾಗದಿಂದ ಹಲ್ಲೆ ಮಾಡಿದ್ದ ಅಜರ್ ಅರೆಸ್ಟ್, ವಿಚಾರಣೆ ವೇಳೆ ಸಿಕ್ಕಿದ್ದೇನು?
ಈ ಬಗ್ಗೆ ಇಲಾಖಾ ಮುಖ್ಯಸ್ಥರುಗಳಿಗೆ ತಮ್ಮ ಇಲಾಖೆಯ ಅಧೀನ ಅಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಾಗಿ ಕ್ರಮ ವಹಿಸುವಂತೆ ನಿರ್ದೇಶಿಸಿದ್ದಾರೆ. ಜಿಲ್ಲೆಯ ಎಲ್ಲ ಇಲಾಖೆಯ ಮುಖ್ಯಸ್ಥರುಗಳು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿಯನ್ನು ಪಡೆಯದೇ ತಮ್ಮ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ನಿರ್ದೇಶಿಸಿದ್ದಾರೆ.
Basavaraj Bommai | ಶೂರತ್ವದ ಮಾತನಾಡುವ ಕಾಂಗ್ರೆಸ್’ಗೆ 60 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳೇ ಇಲ್ಲ