ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ಏ.24 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಅಂತಿಮವಾಗಿ ಚುನಾವಣೆ ಎದುರಿಸಲು 74 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ?
SHIMOGA RURAL | ಶಿವಮೊಗ್ಗ ಗ್ರಾಮಾಂತರ 111 ಕ್ಷೇತ್ರದಲ್ಲಿ ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೆ.ಬಿ.ವಿಜಯ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ ಎಸ್.ಕೆ.ಶ್ರೀನಿವಾಸ್, ಆಮ್ ಆದ್ಮಿ ಪಾರ್ಟಿಯ ಎಸ್.ಎಸ್.ಮಂಜುನಾಥ್, ಭಾರತೀಯ ಜನತಾ ಪಾರ್ಟಿಯ ಕೆ.ಬಿ.ಅಶೋಕನಾಯ್ಕ, ಬಹುಜನ ಸಮಾಜ ಪಾರ್ಟಿಯ ಎ.ಡಿ.ಶಿವಪ್ಪ, ಕರ್ನಾಟಕ ರಾಷ್ಟ್ರ ಸಮಿತಿಯ ಇ.ನಿರಂಜನ, ಜನತಾ ದಳ(ಎಸ್) ಶಾರದಾ ಪೂರ್ಯಾನಾಯ್ಕ, ಪಕ್ಷೇತರ ಎಲ್.ರಂಗಸ್ವಾಮಿ, ಬಿ.ಎಚ್.ಭೀಮಪ್ಪ, ಟಿ.ತಿಪ್ಪೇರುದ್ರಸ್ವಾಮಿ, ಪ್ರವೀಣ್ ನಾಯ್ಕ್ ಕಣದಲ್ಲಿ ಉಳಿದಿದ್ದಾರೆ.
READ | ಶಿವಮೊಗ್ಗದಲ್ಲಿ ರಾತ್ರಿ ಕಾರ್ಯಾಚರಣೆ, 10 ಜನರು ಪೊಲೀಸರ ವಶಕ್ಕೆ, ಕಾರಣವೇನು?
BHADRAVATHI | ಭದ್ರಾವತಿ-112 ಕ್ಷೇತ್ರದಲ್ಲಿ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಕರ್ನಾಟಕ)ದ ಪಿ.ಇ.ಬಸವರಾಜಪ್ಪ, ಎಎಪಿ ಆನಂದ್, ಐಎನ್.ಸಿ ಬಿ.ಕೆ.ಸಂಗಮೇಶ್ವರ್, ಜನತಾ ದಳ(ಸಂಯುಕ್ತ) ಬಿ.ಕೆ.ಶಶಿಕುಮಾರ್, ಜನತಾ ದಳ(ಎಸ್) ಶಾರದಾ ಅಪ್ಪಾಜಿ, ಬಿಜೆಪಿ ಎಂ.ಜಿ.ರುದ್ರೇಶ್, ಕರ್ನಾಟಕ ರಾಷ್ಟ್ರ ಸಮಿತಿಯ ಸುಮಿತ್ರಾ ಬಾಯಿ, ಪಕ್ಷೇತರ ಜಾನ್ ಬೆನ್ನಿ, ಎಸ್.ರಾಜಶೇಖರ್, ಎಸ್.ಕೆ.ಸುಧೀಂದ್ರ, ವೈ.ಶಶಿಕುಮಾರ್, ಡಿ. ಮೋಹನ್, ಬಿ.ಎನ್.ನಾಗರಾಜ್, ಅಹಮದ್ ಅಲಿ ಕಣದಲ್ಲಿದ್ದಾರೆ.
SHIMOGA | ಶಿವಮೊಗ್ಗ-113 ಕ್ಷೇತ್ರದಲ್ಲಿ ಒಟ್ಟು 15 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯ ಎಸ್.ಎನ್.ಚನ್ನಬಸಪ್ಪ, ಇಂಡಿಯನ್ ನ್ಯಾಶನಲ್ ಕಾಂಗ್ರೆಸ್’ನ ಎಚ್.ಸಿ.ಯೋಗೇಶ್, ಎಎಪಿ ಟಿ.ನೇತ್ರಾವತಿ, ಜೆಡಿಎಸ್ ಆಯನೂರ್ ಮಂಜುನಾಥ್, ಉತ್ತಮ ಪ್ರಜಾಕೀಯ ಪಾರ್ಟಿಯ ವೆಂಕಟೇಶ್ ಆರ್, ಕೆಆರ್.ಎಸ್ ನ ಡಿ.ರಾಜೇಂದ್ರ, ಪಕ್ಷೇತರ ರಿಯಾಜ್ ಅಹಮದ್, ಮೊಹಮ್ಮದ್ ಯೂಸುಫ್ ಖಾನ್, ಬಿ.ಎಸ್.ಅಜಯ್ ಕುಮಾರ್, ಎಚ್.ಎಂ.ಅಕ್ಕಮಹಾದೇವಿ ಶೇಖರನಾಯ್ಕ್, ವಿ.ಹನುಮಶೆಟ್ಟಿ, ಎಂ.ಆರ್.ಅನಿಲ್, ಎಚ್.ಎಸ್.ಗಣೇಶ್, ಎನ್.ರವಿಕುಮಾರ್ ಕಣದಲ್ಲಿದ್ದಾರೆ.
THIRTHAHALLI | ತೀರ್ಥಹಳ್ಳಿ-114 ಕ್ಷೇತ್ರದಲ್ಲಿ ಒಟ್ಟು 5 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಆರಗ ಜ್ಞಾನೇಂದ್ರ, ಎಎಪಿ ಶಿವಕುಮಾರಗೌಡ, ಇಂಡಿಯನ್ ನ್ಯಾಶನಲ್ ಕಾಂಗ್ರೆಸ್’ನ ಕಿಮ್ಮನೆ ರತ್ನಾಕರ, ಕೆಆರ್.ಎಸ್ ನ ಕೆ.ಎ.ಅರುಣ್, ಜೆಡಿಎಸ್ ರಾಜಾರಾಂ ಹೆಗ್ಗಡೆ ಕಣದಲ್ಲಿದ್ದಾರೆ.
SHIKARIPURA | ಶಿಕಾರಿಪುರ-115 ಕ್ಷೇತ್ರದಲ್ಲಿ ಒಟ್ಟು 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆರ್.ಪಿಐ ಪಕ್ಷದ ಯಲ್ಲಪ್ಪ, ಕೆಆರ್.ಎಸ್ ಪಕ್ಷದ ರವಿನಾಯ್ಕ್, ಎಎಪಿ ಆರ್.ಎಸ್.ಚಂದ್ರಕಾಂತ್, ಬಿಜೆಪಿಯ ಬಿ.ವೈ.ವಿಜಯೇಂದ್ರ, ಪಕ್ಷೇತರ ಇಮ್ತಿಯಾಜ್ ಅತ್ತರ್, ಜಿ.ಬಿ.ಮಾಲತೇಶ್, ಅನಿಲ್.ಎಂ.ಆರ್, ಮೊಹಮ್ಮದ್ ಸಾದಿಕ್, ಎಸ್.ಪಿನಾಗನಗೌಡ, ಆರ್.ಗಣೇಶ್ ಕಣದಲ್ಲಿದ್ದಾರೆ.
READ | ಶಿವಮೊಗ್ಗ, ಭದ್ರಾವತಿಯ ಬೆಟ್ಟಿಂಗ್ ಕಿಂಗ್’ಪಿನ್ ಅರೆಸ್ಟ್, ಖಾತೆಯಲ್ಲಿತ್ತು ಲಕ್ಷ ಲಕ್ಷ ರೂಪಾಯಿ
SORAB | ಸೊರಬ-116 ಕ್ಷೇತ್ರದಲ್ಲಿ ಒಟ್ಟು 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೆಡಿಎಸ್ ನಿಂದ ಬಿ.ಚಂದ್ರಪ್ಪಗೌಡ, ಸಮಾಜವಾದಿ ಪಾರ್ಟಿ ವಿ.ಜಿ.ಪರಶುರಾಮ, ಎಎಪಿಯ ಕೆ.ವೈ.ಚಂದ್ರಶೇಖರ್, ಉತ್ತಮ ಪ್ರಜಾಕೀಯ ಪಾರ್ಟಿ ಸಿ.ಎಸ್.ಲಕ್ಷ್ಮೀಕಾಂತ್, ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ ಮಧು ಬಂಗಾರಪ್ಪ, ಬಿಜೆಪಿ ಎಸ್.ಕುಮಾರ್ ಬಂಗಾರಪ್ಪ, ಕೆಆರ್.ಎಸ್ ಟಿ.ಮಂಜುನಾಥ್, ಪಕ್ಷೇತರ ಎಸ್.ಎಸ್.ಶಿವಯೋಗಿ, ಗುಡ್ಡಪ್ಪ, ಜೆ.ಎಸ್.ಚಿದಾನಂದ ಗೌಡ ಕಣದಲ್ಲಿದ್ದಾರೆ.
00 | ಸಾಗರ-117 ಕ್ಷೇತ್ರದಲ್ಲಿ ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೆಡಿಎಸ್ ಸೈಯದ್ ಜಾಕಿರ್, ಕೆಆರ್.ಎಸ್ ಬಿ.ಇ.ಕಿರಣ್, ಬಿಜೆಪಿ ಎಚ್.ಹಾಲಪ್ಪ, ಉತ್ತಮ ಪ್ರಜಾಕೀಯ ಪಾರ್ಟಿ ಎನ್.ಸೋಮರಾಜ್, ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ ಗೋಪಾಲಕೃಷ್ಣ ಬೇಳೂರು, ಎಎಪಿ ಕೆ.ದಿವಾಕರ್, ಪಕ್ಷೇತರ ಕೆ.ವಿ.ಶಿವಕುಮಾರ್, ಹರಟೆ ಗಾಮಪ್ಪ, ಟಿ.ಎನ್.ಶ್ರೀನಿವಾಸ್ ಕಣದಲ್ಲಿದ್ದಾರೆ.
Property details | ವಿಜಯೇಂದ್ರ, ಮಧು, ಕುಮಾರ, ಬೇಳೂರು ಆಸ್ತಿ ಎಷ್ಟು? ಬಹುಕೋಟಿ ಒಡೆಯರಿವರು