ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಹೊಂಗಿರಣ ಸಂಸ್ಥೆಯಿಂದ ಏ.16ರಿಂದ 20 ದಿನಗಳ ಕಾಲ ಕೋಟೆ ರಸ್ತೆಯ ವಾಸವಿ ವಿದ್ಯಾಲಯದಲ್ಲಿ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದು ಶಿಬಿರದ ನಿರ್ದೇಶಕ ಡಾ. ಸಾಸ್ವೆಹಳ್ಳಿ ಸತೀಶ್ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 26 ವರ್ಷಗಳಿಂದ ರಂಗಭೂಮಿ ಸಾಹಿತ್ಯ, ಸಂಗೀತ ಕ್ಷೇತ್ರಗಳಲ್ಲಿ ಹೆಸರು ಮಾಡಿದೆ. ಮುಖ್ಯವಾಗಿ ಮಕ್ಕಳ ರಂಗಶಿಬಿರಗಳನ್ನು ಏರ್ಪಡಿಸಿದೆ. ಈ ಬಾರಿ ಕೂಡ ಏ.16ರಿಂದ 20 ದಿನಗಳ ಕಾಲ ವಾಸವಿ ವಿದ್ಯಾಲಯದಲ್ಲಿ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30ರ ವರೆಗೆ ಶಿಬಿರ ನಡೆಯಲಿದೆ ಎಂದರು.
READ | ಮನೆ ಪಕ್ಕವೇ ಇಟ್ಟಿದ್ದ ಬೋರ್’ವೆಲ್ ಕೇಸಿಂಗ್ ಪೈಪ್ ಕಳ್ಳತನ, ಕಿಂಗ್ಪಿನ್ ಅರೆಸ್ಟ್
ಶಿಬಿರದ ವಿಶೇಷಗಳೇನು?
ಶಿಬಿರದಲ್ಲಿ ಮುಖ್ಯವಾಗಿ ರಂಗತರಬೇತಿ, ಜಾನಪದ ಸಾಹಿತ್ಯ, ನೃತ್ಯ, ಹಾಡು, ಆಕಾಶ ವೀಕ್ಷಣೆ, ಪವಾಡ ರಹಸ್ಯ, ಗೊಂಬೆಯಾಟ, ಮಾಡೆಲಿಂಗ್ ಪ್ರಸಾಧನ ಹೀಗೆ ಹಲವು ಹತ್ತು ವಿಷಯಗಳನ್ನು ಕಲಿಸಲಾಗುತ್ತದೆ. ಜೊತೆಗೆ ಸಾಹಸ ಕ್ರೀಡೆಯೂ ಇರುತ್ತದೆ. ಒಂದು ದಿನದ ಕಿರುಪ್ರವಾಸ ಕೂಡ ಆಯೋಜಿಸಲಾಗಿದೆ. ಮನರಂಜನೆಯ ಜೊತೆಗೆ ಸಾಹಿತ್ಯ, ಸಂಗೀತ, ಕಲೆ ಈ ಎಲ್ಲಾ ವಿಷಯಗಳನ್ನು ಕಲಿಸಲಾಗುತ್ತದೆ.
ಶಿಬಿರದಲ್ಲಿ ಪ್ರಸಿದ್ಧ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಹೇಳಿಕೊಡಲಿದ್ದಾರೆ. ವೇದ ಚಿತ್ರದ ಜುಂಜಪ್ಪ ಹಾಡಿನ ಖ್ಯಾತಿಯ ಮೋಹನ್ಕುಮಾರ್ ರಾಷ್ಟ್ರ ಮಟ್ಟದ ಖ್ಯಾತಿಯ ಹುಸೇನಿ, ಆಕಾಶಕಾಯಗಳ ಅಧ್ಯಯನ ನಡೆಸಿರುವ ಹಾರೋಹಳ್ಳಿ ಸ್ವಾಮಿ ಕತೆಗಾರ ಶಿವಕುಮಾರ ಮಾವಲಿ, ರಂಗ ಕಲಾವಿದ ಅಜಯ್ ನೀನಾಸಂ, ಕಾಮಿಡಿ ಕಿಲಾಡಿಯ ಹೊಂಗಿರಣ ಚಂದ್ರು, ಧಾರಾವಾಹಿ ನಟ ಚಂದ್ರಶೇಖರ ಶಾಸ್ತ್ರಿ ಸೇರಿದಂತೆ ಹತ್ತಾರು ಕಲಾವಿದರು, ವಿಜ್ಞಾನಿಗಳು, ಕುಶಲ ಕರ್ಮಿ ಸಂಪನ್ಮೂಲ ವ್ಯಕ್ತಿಗಳು ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದರು.
ರಂಗಮಂದಿರದಲ್ಲಿ ಸಮಾರೋಪ ಸಮಾರಂಭ
ಶಿಬಿರದ ಸಮಾರಂಭವು ಮೇ.4 ಮತ್ತು 5ರಂದು ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ. ಶಿಬಿರದಲ್ಲಿ ಕಲಿತ ಮಕ್ಕಳೇ ಈ ಸಮಾರಂಭದಲ್ಲಿ ತಾವು ಕಲಿತ ವಿಷಯಗಳನ್ನು ಪ್ರದರ್ಶನ ಮಾಡಲಿದ್ದಾರೆ ಎಂದ ಅವರು, ಶಿಬಿರದಲ್ಲಿ 6ರಿಂದ 17 ವರ್ಷದ ಮಕ್ಕಳು ಭಾಗವಹಿಸಬಹುದಾಗಿದೆ. ಈಗಾಗಲೇ ನೊಂದಣಿ ಆರಂಭವಾಗಿದೆ. 50 ಮಕ್ಕಳಿಗೆ ಮಾತ್ರ ಅವಕಾಶ ಇದೆ. ಹೆಚ್ಚಿನ ವಿವರಗಳಿಗೆ 9844364071, 9741960356 ಅನ್ನು ಸಂಪರ್ಕಿಸಬಹುದಾಗಿದೆ ಎಂದರು.
ಹೊಂಗಿರಣದ ಅಧ್ಯಕ್ಷ ಎಚ್.ಎಂ. ಸುಬ್ರಹ್ಮಣ್ಯ, ಶ್ರೀಕಂಠ ಪ್ರಸಾದ್, ಹೊಂಗಿರಣ ಚಂದ್ರು, ಗಿರಿಧರ್ ಇದ್ದರು.
Money demand | ಭದ್ರಾವತಿ ಸಿಡಿಪಿಓಗೆ ₹1.20 ಲಕ್ಷ ಹಣ ನೀಡುವಂತೆ ಧಮ್ಕಿ, ಕಾರಣವೇನು?