Teacher Job | ಖಾಲಿ ಶಿಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, ಯಾರೆಲ್ಲ‌ ಅರ್ಜಿ ಸಲ್ಲಿಸಬಹುದು?

teacher

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯವರ ಚಿತ್ರದುರ್ಗದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿ ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ., ಬಿ.ಇಡಿ. ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ ಹಾಗೂ ಮಾಜಿ ಸೈನಿಕರ ಮೂಲ ದಾಖಲೆಯೊಂದಿಗೆ ಮೇ-05ರಂದು ಮಧ್ಯಾಹ್ನ 1 ಗಂಟೆಯೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಖುದ್ದಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220925 ನ್ನು ಸಂಪರ್ಕಿಸುವುದು.

Penalty | ಶಿವಮೊಗ್ಗದಲ್ಲಿ ವಾಹನಗಳಿಗೆ ₹25 ಲಕ್ಷ ದಂಡ, 106 ವಾಹನಗಳ‌ಉ ಸೀಜ್, ಕಾರಣವೇನು?

error: Content is protected !!