ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸಾಗರ(Sagar)ದ ಪೊಲೀಸ್ ಠಾಣೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ (CS Shadakshari) ವಿರುದ್ಧ ಪ್ರಕರಣ ದಾಖಲಾಗಿದೆ.
ಕಾರಣವೇನು?
ಮಾಹಿತಿ ಹಕ್ಕು ಕಾರ್ಯಕರ್ತ ಒಬ್ಬನಿಗೆ (Right to Information activist) ಜೀವ ಬೆದರಿಕೆ ಒಡ್ಡಿದ ಆರೋಪದ ಎಂಬ ಕಾರಣಕ್ಕೆ ಸಿ.ಎಸ್.ಷಡಾಕ್ಷರಿ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಲಾಗಿತ್ತು. ನ್ಯಾಯಾಲವು ಅರ್ಜಿಯನ್ನು ಪರಿಶೀಲಿಸಿದ ಬಳಿಕ ಸೂಚನೆ ನೀಡಿದ್ದು, ಅದರನ್ವಯ ಎಫ್ಐಆರ್ ದಾಖಲಾಗಿದೆ.
READ | ಹೆಣ್ಣು ಮಕ್ಕಳಿಗೆ ಶುಭ ಸುದ್ದಿ, ಪಿಯುಸಿ ಉಚಿತ ಪ್ರವೇಶ, ಇಲ್ಲಿದೆ ಪೂರ್ಣ ಮಾಹಿತಿ
ತಾಳಗುಪ್ಪದ ಎಸ್.ಪಿ.ಓಂಕಾರ ಎಂಬುವವರು ಸಿ.ಎಸ್.ಷಡಾಕ್ಷರಿ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಸಾಗರದ ಗಾಂಧಿ ಮೈದಾನದಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಸ್.ಷಡಾಕ್ಷರಿ ಅವರು, “ಓಂಕಾರ ಅವರನ್ನು ಗುರಿಯಾಗಿಸಿಕೊಂಡು ಬೆದರಿಕೆ ಒಡ್ಡುವಂತೆ ಮಾತನಾಡಿದ್ದಾರೆ. ಪ್ರಾಣ ಬೆದರಿಕೆಯನ್ನೂ ಒಡ್ಡಿದ್ದಾರೆ” ಎಂದು ಆರೋಪಿಸಿ ಓಂಕಾರ ಅವರು ಖಾಸಗಿ ದೂರು ದಾಖಲಿಸಿದ್ದರು.
ಇದನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಎಫ್ಐಆರ್ ದಾಖಲಿಸುವಂತೆ ಸಾಗರ ಠಾಣೆಗೆ ಸೂಚಿಸಿತ್ತು. ಅದರಂತೆ ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
Kidnap case | ಶಿವಮೊಗ್ಗದಲ್ಲಿ ಮಹಿಳೆ ಅಪಹರಣ ಪ್ರಕರಣಕ್ಕೆ ಬಿಗ್ ಟ್ಚಿಸ್ಟ್, ನನ್ ಆಗುವುದಕ್ಕೆ ಕಿಡ್ನ್ಯಾಪ್ ನಾಟಕ!