ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಶಿವಮೊಗ್ಗ ವಿಭಾಗದ ವತಿಯಿಂದ 262 ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.
ಆದ್ದರಿಂದ ಮೇ 9 ಮತ್ತು 10 ರಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿರುತ್ತಾರೆ.
READ | ಭದ್ರಾವತಿಯ ವ್ಯಕ್ತಿಯೊಬ್ಬನಿಗೆ 20 ವರ್ಷ ಜೈಲುು ಶಿಕ್ಷೆ, ಕಾರಣವೇನು?
ಮತದಾನ ಹಿನ್ನೆಲೆ ಸಂತೆ ಮತ್ತು ಜಾತ್ರೆ ನಿಷೇಧ
ಮತದಾನ ಕಾರ್ಯವು ಮೇ 10 ರಂದು ಹಾಗೂ ಮತ ಎಣಿಕೆ ಕಾರ್ಯವು ಮೇ 13 ರಂದು ನಡೆಯಲಿದ್ದು, ಈ ಎರಡು ದಿನಗಳಂದು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಡೆಸದಂತೆ ನಿಷೇದಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.
Narendra modi | ಆಯನೂರಿಗೆ ಪ್ತಧಾನಿ ನರೇಂದ್ರ ಮೋದಿ, ಎಷ್ಟು ಜನ ಸೇರಲಿದ್ದಾರೆ? ಏನೇನು ವ್ಯವಸ್ಥೆ?