ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಸೈನ್ಸ್ ಮೈದಾನದಲ್ಲಿ ಮಾಜಿ ಸಚಿವ, ಶಾಸಕ ಕೆ.ಎಸ್.ಈಶ್ವರಪ್ಪ ಅವರು ಕುಟುಂಬದೊಂದಿಗೆ ಮತಗಟ್ಟೆಗೆ ಆಗಮಿಸಿ ಬುಧವಾರ ಬೆಳಗ್ಗೆ ಮತ ಚಲಾವಣೆ ಮಾಡಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತದಾನ ಮಾಡಿದ್ದೇನೆ. ಬೆಳಗ್ಗೆ 10 ಗಂಟೆಯವರೆಗೆ ಶೇ.20ಕ್ಕಿಂತ ಅಧಿಕ ಪೋಲಿಂಗ್ ಆಗಿದೆ . ಹೆಚ್ಚು ಮತಗಳ ಚಲಾವಣೆ ಆಗುವ ನಿರೀಕ್ಷೆ ಇದೆ.
READ | ಮತಗಟ್ಟೆ ತಲುಪಿದ ಮತಯಂತ್ರಗಳು, ಎಷ್ಟು ಸಿಬ್ಬಂದಿ ನಿಯೋಜನೆ, ಅಭ್ಯರ್ಥಿಗಳ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ
- ಶಿವಮೊಗ್ಗ ನಗರದಲ್ಲಿ ಬಿಜೆಪಿ ಗೆಲ್ಲುವುದು ಪಕ್ಕಾ. ರಾಜ್ಯದಲ್ಲಿಯೇ ಶಿವಮೊಗ್ಗ ಹಿಂದುತ್ವದ ಕೇಂದ್ರವಾಗಿದ್ದು, ಇಲ್ಲಿ ಪಕ್ಷದ ಸಂಘಟನೆ ನಿರೀಕ್ಷೆ ಮೀರಿ ಬೆಳೆದಿದೆ.
- ಕನಿಷ್ಠ 60 ಸಾವಿರ ಅಂತರದಿಂದ ಜಯ. ಕಳೆದ ಚುನಾವಣೆಯಲ್ಲಿ 46 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದೇವು. ಈ ಸಲ 60 ಸಾವಿರ ಅಂತರದಲ್ಲಿ ಗೆಲ್ಲುವ ಭರವಸೆ ಇದೆ.
- ಎಲ್ಲ ಸಮುದಾಯದವರ ಪ್ರಗತಿಗೆ ಬಿಜೆಪಿ ಶ್ರಮಿಸಿದೆ. ಈ ಅಭಿವೃದ್ಧಿ ಕಾರ್ಯಗಳಿಂದಾಗಿ ಜನರು ಬಿಜೆಪಿಗೆ ಮತ ನೀಡುವ ವಿಶ್ವಾಸವಿದೆ.
ಪಕ್ಷದ ಶಿಸ್ತಿನ ಸಿಪಾಯಿ ನಾನು
“ನಾನು ಪಕ್ಷದ ಶಿಸ್ತಿನ ಸಿಪಾಯಿ, ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುವೆ. ಜತೆಗೆ, ಪಕ್ಷದ ಸೂಚನೆಯಂತೆ ಕಣದಿಂದ ಹಿಂದೆ ಸರಿದಿದ್ದೇನೆ. ಪಕ್ಷದ ಸಂಘಟನೆಗಾಗಿ ಶ್ರಮಿಸಿ ಚನ್ನಿ ಅವರು ಕಣದಲ್ಲಿದ್ದಾರೆ. ಅವರ ಗೆಲುವಿಗಾಗಿ ನಾವೆಲ್ಲರು ಶ್ರಮಿಸುತ್ತಿದ್ದೇವೆ. ಗೆಲ್ಲುವ ವಿಶ್ವಾಸವಿದೆ” ಎಂದರು.
ರಾಜ್ಯದಲ್ಲಿ ಬಿಜೆಪಿಗೆ 140 ಸೀಟ್’ಗಳನ್ನು ಗೆಲ್ಲುವ ನಂಬಿಕೆ ನನಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ಸೋಲುತ್ತಾರೆ. ಚಾಮುಂಡೇಶ್ವರಿಗೆ ಡಿಕೆಶಿ, ಸಿದ್ದರಾಮಯ್ಯ ಸೇರಿ ಹೋಗಿದ್ದು ಭಕ್ತಿಯಿಂದಲ್ಲ. ಹಿಂದೂಗಳ ಓಟ್ ಬ್ಯಾಂಕ್ಗಾಗಿ ಎಂದು ಆರೋಪಿಸಿದರು.
ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಸೇರಿದಂತೆ ಕುಟುಂಬದ ಸದಸ್ಯರಿದ್ದರು.
Postal ballet | ಮನೆಯಿಂದಲೇ ಓಟ್’ಗೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಎಷ್ಟು ಮತದಾನವಾಗಿದೆ?