ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿಧಾನಸಭಾ ಸಾರ್ವತ್ರಿಕ ಚುನಾವಣೆ (Karnataka assembly election)ಯ ಮತ ಎಣಿಕೆಯು ಮೇ 13 ರಂದು ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ. ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಸುಗಮ ಸಂಚಾರದ ದೃಷ್ಟಿಯಿಂದ ಅಂದು ತಾತ್ಕಾಲಿಕವಾಗಿ ವಾಹನಗಳ ಸಂಚಾರವನ್ನು ಕೆಳಕಂಡಂತೆ ಬದಲಿ ಮಾರ್ಗದಲ್ಲಿ ಚಲಿಸಲು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಅಧಿಸೂಚನೆ ಹೊರಡಿಸಿದ್ದಾರೆ.
ಸಹ್ಯಾದ್ರಿ ಕಾಲೇಜಿನ (Sahyadri college) ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ.
READ | ಪ್ರಯಾಣಿಕರೇ ಗಮನಿಸಿ, ಮೇ 9, 10 ರಂದು ಬಸ್ ಸಂಚಾರದಲ್ಲಿ ವ್ಯತ್ಯಯ
ಪರ್ಯಾಯ ಮಾರ್ಗಗಳ ಮಾಹಿತಿ
- ಬೆಂಗಳೂರು(Bengaluru), ಭದ್ರಾವತಿ(Bhadravathi), ಎನ್.ಆರ್.ಪುರ (NR Pura) ಕಡೆಯಿಂದ ಬರುವ ಎಲ್ಲ ಭಾರೀ ವಾಹನ ಮತ್ತು ಎಲ್ಲಾ ಬಸ್ಸುಗಳು ಹಾಗೂ ಕಾರು, ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
- ಚಿತ್ರದುರ್ಗ (Chitradurga) ಹೊಳೆಹೊನ್ನೂರಿನಿಂದ (Holehonnur) ಬರುವ ಮತ್ತು ಹೋಗುವ ಎಲ್ಲ ಭಾರೀ ವಾಹನ ಮತ್ತು ಬಸ್ಸುಗಳು ಬಿ.ಎಚ್.ರಸ್ತೆ (BH Road) ಮಾರ್ಗವಾಗಿ ಬಸ್ಸ್ಟ್ಯಾಂಡ್ಗೆ ಹೋಗುವುದು.
- ಹೊನ್ನಾಳಿ (Honnali) ದಾವಣಗೆರೆ(Davanagere)ಯಿಂದ ಬರುವ ಭಾರೀ ವಾಹನ, ಎಲ್ಲ ಬಸ್ಗಳು 100 ಅಡಿ ರಸ್ತೆ, ವಿನೋಬನಗರ (vinoba nagar) ಮಾರ್ಗವಾಗಿ ಹೋಗುವುದು.
- ಕೆ.ಎಸ್.ಆರ್.ಟಿ.ಸಿ (KSRTC) ಮತ್ತು ಖಾಸಗಿ ಬಸ್ ನಿಲ್ದಾಣ(Private bus stand)ದಿಂದ ಹೊನ್ನಾಳಿ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್ಗಳು ಎಎ ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮುಖಾಂತರವಾಗಿ ಹೋಗುವುದು.
- ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು ಭದ್ರಾವತಿ ಎನ್.ಆರ್.ಪುರ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.
- ಈ ಎಲ್ಲ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ.
ಎಲ್ಲೆಲ್ಲಿ ಪಾರ್ಕಿಂಗ್ ವ್ಯವಸ್ಥೆ ಇರಲಿದೆ, ಎಲ್ಲಿ ವಾಹನ ನಿಲುಗಡೆ ನಿಷೇಧ?
- ಏಜೆಂಟರು ಮತ್ತು ಎಲ್ಲ ಇಲಾಖೆಯ ಅಧಿಕಾರಿಗಳ ವಾಹನಗಳ ನಿಲುಗಡೆ ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು ಮತ್ತು ವಜ್ರ ಮಹೋತ್ಸವ ಕಟ್ಟಡದ ಎದುರು ಪಾರ್ಕಿಂಗ್ಗೆ ಅನುಮತಿ ನೀಡಿದೆ.
- ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳ ನಿಲುಗಡೆ ಬಿ.ಎಚ್.ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ವಾಹನ ನಿಲುಗಡೆಗೆ ಅನುಮತಿ ನೀಡಿದೆ.
- ಎಂ.ಆರ್.ಎಸ್.ಸರ್ಕಲ್ನ ಹತ್ತಿರವಿರುವ ಕೆಇಬಿ ಸಮುದಾಯ ಭವನದ ಹಿಂಭಾಗ ವಾಹನಗಳ ನಿಲುಗಡೆಗೆ ಅನುಮತಿ ನೀಡಿದೆ.
- ಸಾರ್ವಜನಿಕರ ಕಾರು ಮತ್ತು ದ್ವಿಚಕ್ರ ವಾಹನಗಳ ನಿಲುಗಡೆಗೆ ಎಂಆರ್ಎಸ್ ನಿಂದ ಎನ್.ಆರ್.ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ಗೆ ಅನುಮತಿ ನೀಡಿದೆ.
- ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂ ಹತ್ತಿರ ಸಾರ್ವಜನಿಕರ ಎಲ್ಲ ವಾಹನಗಳ ನಿಲುಗಡೆಗೆ ಅನುಮತಿ ನೀಡಿದೆ.
- ಎಂ.ಆರ್.ಎಸ್.ಸರ್ಕಲ್ ನಿಂದ ಬಿ.ಎಚ್.ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ನಿಷೇಧಿಸಿದೆ.