ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: “ಶಿಕಾರಿಪುರ (Shikaripura) ನನ್ನ ಜನ್ಮಭೂಮಿ. ಇನ್ನು ಕರ್ಮಭೂಮಿಯನ್ನಾಗಿ ಮಾಡಿಕೊಳ್ಳುತ್ತಿದ್ದೇನೆ” ಎಂದು ಶಿಕಾರಿಪುರ ಬಿಜೆಪಿ ಉಮೇದುವಾರ ಬಿ.ವೈ.ವಿಜಯೇಂದ್ರ ( BY Vijayendra) ಹೇಳಿದರು.
ಪ್ರೆಸ್ ಟ್ರಸ್ಟ್ನಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಶಿಕಾರಿಪುರ ಇಲ್ಲಿಯವರೆಗೆ ಬಿ.ಎಸ್. ಯಡಿಯೂರಪ್ಪ ಅವರ ಕರ್ಮಭೂಮಿಯಾಗಿತ್ತು. ಈ ಬಾರಿ ಶಿಕಾರಿಪುರದಿಂದ ತಾನು ಚುನಾವಣೆ ಕಣಕ್ಕಿಳಿದಿದ್ದು, ಸುಮಾರು 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಭರವಸೆ ಇದೆ ಎಂದರು.
READ | ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ, ಏನೇನಿದೆ?
ಬಂಜಾರರು ಬಿಜೆಪಿ ಪರವಾಗಿದ್ದಾರೆ
ಬಂಜಾರ ಮೀಸಲಾತಿ ವಿಷಯ ಇಟ್ಟುಕೊಂಡು ಕೆಲವರು ಒಡಕು ಸೃಷ್ಟಿಸಲು ಯತ್ನಿಸಿದರು. ಯಡಿಯೂರಪ್ಪ ಅವರಿಗೆ ತೊಂದರೆ ಕೊಡಬೇಕೆಂಬ ಉದ್ದೇಶದಿಂದ ಅವರ ಮನೆಗೆ ಕಲ್ಲುಹೊಡೆಸಿದರು. ಆದರೆ ಇದರಿಂದ ಅವರ ಉದೇಶ ಈಡೇರದು. ವಿಷ ಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ ನಡೆಯದು. ಬಂಜಾರರು ಬಿಜೆಪಿ ಪರವಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಿಶ್ಚಿತ
ಜನರು ಅಭಿವೃದ್ಧಿಗಾಗಿ ಈ ಬಾರಿ ಮತ್ತೆ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಆದುದರಿಂದ ಈ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ನಿಶ್ಚಿತ. ಬಿಜೆಪಿ ಪ್ರಣಾಳಿಕೆ ಬಿಡುಗಡೆಯಾಗಿದೆ. ಸಮಾನ ನ್ಯಾಯ, ನೀತಿಯನ್ನು ಅದು ಪ್ರತಿಪಾದಿಸಿದೆ. ಎಲ್ಲ ವರ್ಗಗಳ ಶ್ರೇಯೋಭಿವೃದ್ಧಿ ಇಟ್ಟುಕೊಂಡು ಪ್ರಣಾಳಿಕೆ ರಚಿಸಲಾಗಿದೆ. ಕಾಂಗ್ರೆಸ್ ಗ್ಯಾರೆಂಟಿ ಕಾರ್ಡಿನಿಂದ ಏನೂ ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೇರುವುದೇ ಇಲ್ಲ. ಹಾಗಾಗಿ ಕಾರ್ಡಿನಿಂದ ಲಾಭವಿಲ್ಲ. ಜೆಡಿಎಸ್ನವರು ಈ ಬಾರಿ ಅತಂತ್ರ ಸರಕಾರವಾಗುತ್ತದೆ ಎನ್ನುವ ಕನಸು ಕಾಣುತ್ತಿದ್ದಾರೆ ಎಂದರು.
ಚುನಾವಣೆ ಹೊಸ್ತಿಲಲ್ಲಿ ವೀರಶೈವರ ಬಗ್ಗೆ ಅನುಕಂಪ
ಬಜರಂಗದಳದಂತಹ ದೇಶಭಕ್ತ ಸಂಘಟನೆಯನ್ನು ನಿಷೇಧಿಸುವ ಮಾತನ್ನು ಕಾಂಗ್ರೆಸ್ ಹೇಳಿದೆ.
ಈ ಸಂಘಟನೆ ದೇಶಭಕ್ತ ಸಂಘಟನೆ. ಕೇವಲ ಕರ್ನಾಟಕದಲ್ಲಿ ಮಾತ್ರವಿಲ್ಲ, ಹಲವು ರಾಜ್ಯಲ್ಲಿದೆ. ಇದನ್ನು ನಿಷೇಧಿಸುವ ಮಾತು ಹಾಸ್ಯಾಸ್ಪದ. ಕಾಂಗ್ರೆಸ್ಗೆ ಚುನಾವಣಾ ದಿನ ಹತ್ತಿರ ಬರುತ್ತಿರುವಂತೆಯೇ ವೀರಶೈವರ ಬಗ್ಗೆ ಅನುಕಂಪ ಶುರುವಾಗಿದೆ ಎಂದು ಲೇವಡಿ ಮಾಡಿದರು.
ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ ಉಪಸ್ಥಿತರಿದ್ದರು.
Penalty | ಶಿವಮೊಗ್ಗದಲ್ಲಿ ವಾಹನಗಳಿಗೆ ₹25 ಲಕ್ಷ ದಂಡ, 106 ವಾಹನಗಳಉ ಸೀಜ್, ಕಾರಣವೇನು?