ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮನೆಯಲ್ಲಿಟ್ಟಿದ್ದ ಚಿನ್ನದ ಸರವನ್ನು ಕಳವು ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ನವುಲೆ ಗ್ರಾಮದ ಬಿ.ಚೇತನ್(32) ಎಂಬಾತನನ್ನು ಬಂಧಿಸಲಾಯಿತು. ಅಂದಾಜು 3.40 ಲಕ್ಷ ರೂ. ಮೌಲ್ಯದ 68 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
READ | ನಾಳೆ, ನಾಡಿದ್ದು ಶಿವಮೊಗ್ಗಕ್ಕೆ ಕುಡಿಯುವ ನೀರು ಪೂರೈಕೆ ಆಗಲ್ಲ, ಕಾರಣವೇನು?
ಗಾಂಧಿ ನಗರದ ಮನೆಯಲ್ಲಿ ಕಳವು
ಕಳೆದ ತಿಂಗಳು 18ರಂದು ಬೆಳಗಿನ ಜಾವ ಶಿವಮೊಗ್ಗ ನಗರದ ಗಾಂಧಿನಗರ ಬಿ ಬ್ಲಾಕ್ 3ನೇ ಕ್ರಾಸ್’ನಲ್ಲಿರುವ ಮನೆಯೊಂದರಲ್ಲಿ ಇಟ್ಟಿದ್ದ ಬಂಗಾರದ ಸರವನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ತನಿಖಾ ತಂಡದ ಕಾರ್ಯಕ್ಕೆ ಎಸ್ಪಿ ಪ್ರಶಂಸೆ
ಪ್ರಕರಣ ಬೇಧಿಸಲು ಎಸ್.ಪಿ. ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ. ಅನಿಲ್ ಕುಮಾರ್ ಭೂಮರಡ್ಡಿ ಮಾರ್ಗದರ್ಶನದಲ್ಲಿ ಶಿವಮೊಗ್ಗ ಬಿ ಉಪ ವಿಭಾಗದ ಡಿವೈಎಸ್.ಪಿ ಎಂ.ಸುರೇಶ್ ಮೇಲ್ವಿಚಾರಣೆಯಲ್ಲಿ ಜಯನಗರ ಠಾಣೆ ಸಿಪಿಐ ಮಾದಪ್ಪ ನೇತೃತ್ವದಲ್ಲಿ ಎಎಸ್.ಐ ಕರಿಬಸಪ್ಪ, ಸಿಬ್ಬಂದಿ ಆದರ್ಶ, ರೋಷನ್, ರವಿಕಿರಣ್ ಅವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸಿದೆ. ಈ ಕಾರ್ಯಕ್ಕೆ ಎಸ್.ಪಿ. ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Arecanut rate | ಮತ್ತೆ ಏರುಗತಿಯಲ್ಲಿ ಸಾಗಿದ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್?