ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಮುಂಬರುವ ಬಕ್ರೀದ್ ಹಬ್ಬದ (Bakrid Festival) ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ (GK Mithun kumar) ಅವರು ಶಾಂತಿ ಸಮಿತಿ ಸಭೆಯನ್ನು ನಡೆಸಿ, ಕೆಳಕಂಡ ಸೂಚನೆಗಳನ್ನು ನೀಡಿದರು.
READ | ದೊಡ್ಡಪೇಟೆ ಪೊಲೀಸರ ಕಾರ್ಯಾಚರಣೆ, ಒಬ್ಬ ಅರೆಸ್ಟ್, ಅವನ ಬಳಿಯಿತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣ
- ಸಮಾಜದಲ್ಲಿ ಶಾಂತಿ ಕಾಪಾಡುವ ಜವಾಬ್ದಾರಿಯು ಪೊಲೀಸ್ ಇಲಾಖೆಯ ಜೊತೆಗೆ ಪ್ರತಿಯೊಬ್ಬ ನಾಗರಿಕನದ್ದೂ ಆಗಿರುತ್ತದೆ. ಇಲಾಖೆಯು ಸಮಾಜದ ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಲ್ಲಿ ಕೆಲಸ ನಿರ್ವಹಿಸುತ್ತಿರುತ್ತದೆ ಎಂಬ ಮನೋಭಾವ ಬೆಳೆಸಿಕೊಳ್ಳುವುದರಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ.
- ಸಮಾಜದಲ್ಲಿ ಎಲ್ಲ ಧರ್ಮದ ಹಬ್ಬ ಮತ್ತು ಆಚರಣೆಗಳಿಗೆ ಅದರದೇ ಆದ ಪ್ರಾಮುಖ್ಯತೆ ಇದ್ದು, ಅದನ್ನು ತಿಳಿದುಕೊಂಡು ಅರ್ಥಪೂರ್ಣವಾಗಿ, ಶಾಂತಿಯುತವಾಗಿ ಮತ್ತು ಸಮನ್ವಯತೆಯಿಂದ ಹಬ್ಬವನ್ನು ಆಚರಣೆ ಮಾಡುವುದು.
- ಸಾಮಾಜಿಕ ಜಾಲ ತಾಣಗಳಲ್ಲಿ ಯಾವುದೇ ಆಕ್ಷೇಪಾರ್ಹ ವೀಡಿಯೋ/ ಫೋಟೋಗಳನ್ನು ಅಪ್ ಲೋಡ್ ಮಾಡುವುದು, ಹರಿಬಿಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಈ ರೀತಿಯ ಕೃತ್ಯಗಳನ್ನು ಎಸಗುವವರ ವಿರುದ್ದ ಕ್ರಮ ಜರುಗಿಸಲಾಗುವುದು.
- ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಮುಖಾಂತರ ಸೌಹಾರ್ದತೆಗೆ ಭಂಗ ತಂದು ಸಮಸ್ಯೆಗಳನ್ನುಂಟು ಮಾಡುವಂತಹ ಯಾವುದೇ ಘಟನೆಗಳು ಕಂಡುಬಂದಲ್ಲಿ, ಕೂಡಲೇ ಹತ್ತಿರದ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ ERSS 112 ಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳುವುದು.
- ಸಮಾಜದಲ್ಲಿ ಶಾಂತಿ ಕಾಪಾಡುವುದೇ ಪೊಲೀಸ್ ಇಲಾಖೆಯ ಪ್ರಮುಖ ಕರ್ತವ್ಯವಾಗಿದ್ದು, ಸಮಾಜದ ಸ್ವಾಸ್ಥ್ಯ ಮತ್ತು ಸೌಹಾರ್ದತೆಗೆ ಭಂಗ ತರುವಂತಹ ಯಾವುದೇ ಕೃತ್ಯವೆಸಗುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
- ಹಬ್ಬದ ಆಚರಣೆ ಮತ್ತು ಪ್ರಾರ್ಥನೆಯ ಸಂದರ್ಭದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಿದ್ದು, ಎಲ್ಲರೂ ಶಾಂತಿಯುತವಾಗಿ ಹಬ್ಬವನ್ನು ಆಚರಣೆ ಮಾಡಬೇಕು
ಶಾಂತಿ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರಡ್ಡಿ, ಐಪಿಎಸ್ (ಪ್ರೊ) ಅಧಿಕಾರಿ ಬಿಂದು ಮಣಿ, ಡಿವೈಎಸ್.ಪಿ ಬಾಲರಾಜ್, ಸುರೇಶ್ ಸೇರಿದಂತೆ ವಿವಿಧ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರು, ಸಾರ್ವಜನಿಕರು ಉಪಸ್ಥಿತರಿದ್ದರು.
Mobile Tower | ರಾಜ್ಯದಲ್ಲೇ ಅತಿ ಹೆಚ್ಚು ಮೊಬೈಲ್ ಟಾವರ್ ಶಿವಮೊಗ್ಗಕ್ಕೆ ಮಂಜೂರು