ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೃಷಿ ಇಲಾಖೆ(Agriculture department)ಯು 2023-24ನೇ ಸಾಲಿಗೆ ಆತ್ಮ ಯೋಜನೆ(Aatma Scheme)ಯಡಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಸೇವೆಯನ್ನು ಪಡೆಯಲು ಖಾಲಿ ಇರುವ ಮತ್ತು ಆರ್ಥಿಕ ವರ್ಷದಲ್ಲಿ ಉದ್ಭವಿಸಬಹುದಾದ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
READ | ಶಿವಮೊಗ್ಗದಲ್ಲಿ ನಡೆಯಲಿದೆ ಉದ್ಯೋಗ ಮೇಳ, ಯಾರೆಲ್ಲ ಪಾಲ್ಗೊಳ್ಳಲು ಅವಕಾಶ?
ಹೊಂದಿರಬೇಕಾದ ಅರ್ಹತೆಗಳೇನು?
- ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು 45 ವರ್ಷ ಮೀರಿರಬಾರದು.
- ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರತಕ್ಕದ್ದು.
- ಸರ್ಕಾರಿ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರಬೇಕು.
- ಕಂಪ್ಯೂಟರ್ ಸಾಕ್ಷರತೆ ಹೊಂದಿರಬೇಕು.
ಇಲ್ಲಿ ಅರ್ಜಿ ಸಲ್ಲಿಸಿ
ಅಭ್ಯರ್ಥಿಗಳು ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಓ.ಟಿ.ರಸ್ತೆ, ಶಿವಮೊಗ್ಗ ಇಲ್ಲಿ ಪಡೆದು ಸ್ವವಿವರಗಳೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜು.10 ರೊಳಗಾಗಿ ಸಲ್ಲಿಸುವಂತೆ ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.