ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲಾ ಸಾಮಾಜಿಕ ತಜ್ಞರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವಧಿಯಲ್ಲಿ ಮತ್ತು ಕರ್ತವ್ಯದಿಂದ ಬಿಡುಗಡೆ ಹೊಂದಿದ ನಂತರವೂ ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ ನೀಡಿ ಹಾಗೂ ಚೆಕ್ ಗೆ ಸುಳ್ಳು ಸಹಿ ಮಾಡಿದ ವ್ಯಕ್ತಿಯ ವಿರುದ್ಧ ಆರೋಪ ದೃಢಪಟ್ಟಿದ್ದು, ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಬೆಲ್ಲದಬಾಗೇವಾಡಿಯ ವಿನೋದ್ ಎಲ್.ರಾಮದುರ್ಗ(29) ಎಂಬಾತನಿಗೆ 6 ವರ್ಷ ಕಠಿಣ ಕಾರಾವಾಸ ಶಿಕ್ಷೆ, 20,000 ರೂ. ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ ಹೆಚ್ಚುವರಿ 1 ವರ್ಷ ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.
READ | ಗಾಂಧಿ ನಗರದ ಮನೆಯಲ್ಲಿ ಚಿನ್ನ ಸರ ಕದ್ದಿದ್ದ ಆರೋಪಿ ಅರೆಸ್ಟ್
2.54 ಲಕ್ಷ ರೂ. ದುರುಪಯೋಗದ ಆರೋಪ
ವಿನೋದ್ ಅವರು 2011ರ ಮಾರ್ಚ್ 23ರಿಂದ 2013ರ ಮಾರ್ಚ್ 30ರ ಅವಧಿಯಲ್ಲಿ ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ ನೀಡಿ ಹಾಗೂ ಚೆಕ್ ಗೆ ಸುಳ್ಳು ಸಹಿ ಮಾಡಿ 2.54 ಲಕ್ಷ ರೂ. ಹಣವನ್ನು ದುರುಪಯೋಗ ಪಡಿಸಿಕೊಂಡು ಮೋಸ ಮಾಡಿರುತ್ತಾರೆಂದು ಜಲ ಸಂವರ್ಧನೆ ಯೋಜನಾ ಸಂಘದ ಶಿಕಾರಿಪುರ ಘಟಕದ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಶಿರಾಳಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಐಪಿಸಿ ಕಲಂ 408, 420 ಅನ್ವಯ ಪ್ರಕರಣ ದಾಖಲಿಸಿಕೊಂಡು ಆಗಿನ ತನಿಖಾಧಿಕಾರಿ ಶಿರಾಳಕೊಪ್ಪ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಜಿ.ಗುರುಪ್ರಸಾದ್ ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
2ನೇ ಅಧಿಕ ಸಿಜೆ ಮತ್ತು ಜೆಎಂಎಫ್.ಸಿ ನ್ಯಾಯಾಲಯ ಶಿಕಾರಿಪುರದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಧೀಶ ಅವಿನಾಶ್ ಎಂ.ಘಾಳಿ ಅವರು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸಹಾಯಕ ಸರ್ಕಾರಿ ಅಭಿಯೋಜಕರಾದ ಕೀರ್ತಿ ವಾದ ಮಂಡಿಸಿದ್ದದರು.
READ | ನಾಳೆ ಮಂಡಿನೋವಿನ ಪಟ್ಟಿ ಚಿಕಿತ್ಸೆ ಶಿಬಿರ, ಬರಲಿದ್ದಾರೆ ಕೇಂದ್ರ ಪ್ರಶಸ್ತಿ ಪುರಸ್ಕೃತ ತಜ್ಞ ವೈದ್ಯರು
ನಾಲ್ಕು ವರ್ಷ ಜೈಲು ಶಿಕ್ಷೆ
ಚೌಡೇಶ್ವರಿ ಕಾಲೋನಿಯ ಮಂಜುನಾಥ್ (35) ಈತನು ಶಾಹದ್ ನಗರದಲ್ಲಿರುವ ಸತ್ತಾರ್ ಸಾಬ್ ಎಂಬಾತನ ಮನೆಯ ಹತ್ತಿರ ಕುಡಿದುಕೊಂಡು ಹೋಗಿದ್ದರಿಂದ, ಸತ್ತಾರ್ ಸಾಬ್’ನು ಮಂಜುನಾಥನಿಗೆ ಜಾತಿ ನಿಂದನೆ ಮಾಡಿ, ಜೋರಾಗಿ ತಳ್ಳಿ ಅಪರಾಧಿಕ ಮಾನವ ಹತ್ಯೆ ಮಾಡಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಧೀಶರಾದ ಬಿ.ಆರ್ ಪಲ್ಲವಿ ಅವರು ಸಯ್ಯದ್ ಸತ್ತಾರ್(47) ಈತನ ವಿರುದ್ಧದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 4 ವರ್ಷ ಸಾಧಾ ಕಾರಾವಾಸ ಶಿಕ್ಷೆ ಮತ್ತು 25 ಸಾವಿರ ರೂ ದಂಡ, ದಂಡವನ್ನು ಕಟ್ಟಲು ವಿಫಲರಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಪುಷ್ಪ ವಾದ ಮಂಡಿಸಿದ್ದರು.
Court news | ಸಿಲಿಂಡರ್ ಕೊಡಲ್ಲ ಎಂದಿದ್ದಕ್ಕೆ ಮಹಿಳೆಯನ್ನು ಎಳೆದಾಡಿದ ಯುವಕನಿಗೆ ಜೈಲು ಶಿಕ್ಷೆ