ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಷ್ಟ್ರೀಯ ಶಿಕ್ಷಣ ಸಮಿತಿ(National Education Society)ಯ ಅಮೃತ ಮಹೋತ್ಸವ ಸಮಾರೋಪ ಸಮಾರಂಭವನ್ನು ಜೂ.20, 21ರಂದು ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ (GS Narayanarao) ತಿಳಿಸಿದರು.
ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.20 ರಂದು ಬೆಳಗ್ಗೆ 10 ಗಂಟೆಗೆ ಅಮೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಿವಿಧ ವಿದ್ಯಾಸಂಸ್ಥೆಗಳಲ್ಲಿ ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಗುತ್ತಿದೆ. ಕಾರ್ಯಕ್ರಮವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಉದ್ಘಾಟಿಸಲಿದ್ದು, ‘ಜೀವನವೇ ಹಾಸ್ಯ’ ಕುರಿತು ಖ್ಯಾತ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ (Gangavathi Pranesh) ಹಾಸ್ಯ ಲಹರಿ ಹರಿಸಲಿದ್ದಾರೆ ಎಂದರು.
READ | ಯಾರು ರಕ್ತದಾನ ಮಾಡಬಹುದು, ಯಾರು ಮಾಡುವಂತಿಲ್ಲ? ರಕ್ತದ ಮಹತ್ವವೇನು? ರಕ್ತದಾನ ಪ್ರಯೋಜನಗಳೇನು?
ಅಂದು ಸಂಜೆ 4 ಗಂಟೆಯಿಂದ ನಡೆಯುವ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ನೂತನ ಶಾಸಕ ಎಸ್.ಎನ್.ಚನ್ನಬಸಪ್ಪ (SN Channabasappa) ಅವರಿಗೆ ಅಭಿನಂದಿಸಲಾಗುತ್ತಿದೆ. ಚಲನಚಿತ್ರ ನಟ ವಸಿಷ್ಠ ಸಿಂಹ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿವಿಧ ವಿದ್ಯಾಸಂಸ್ಥೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ.
ಎನ್ಇಎಸ್ ಸಂಸ್ಥೆ ವಿವಿಧ ವಿಭಾಗಗಳ ಸುಮಾರು 36 ವಿದ್ಯಾಸಂಸ್ಥೆಗಳನ್ನು ಹೊಂದಿದ್ದ, ಎಲ್ಲಾ ವಿದ್ಯಾಸಂಸ್ಥೆಗಳನ್ನು ಪರಿಚಯಿಸುವ ಎಕ್ಸಪೊ ಮತ್ತು ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳ ಪ್ರದರ್ಶನ ನಡೆಯಲಿದೆ.
– ಎಸ್.ಎನ್.ನಾಗರಾಜ, ಕಾರ್ಯದರ್ಶಿ, ಎನ್.ಇಎಸ್.
ಡಾ.ವೀರೇಂದ್ರ ಹೆಗ್ಗಡೆ ಭಾಗಿ
ಜೂ.21 ರಂದು ಬೆಳಗ್ಗೆ 10 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಸಮಾರೋಪ ಮಾತುಗಳನ್ನಾಡಲಿದ್ದಾರೆ. ಎನ್.ಇ.ಎಸ್ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್ ಉಪಸ್ಥಿತರಿರುವರು.
ಮಕ್ಕಳಿಂದ ಅಮೃತ ನಡಿಗೆ: ಜೂ.17 ರಂದು ಬೆಳಗ್ಗೆ 10ಕ್ಕೆ ಶಿವಮೊಗ್ಗ ನಗರದ ವಿವಿಧ ಭಾಗಗಳಿಂದ ನಮ್ಮ ವಿದ್ಯಾಸಂಸ್ಥೆಗಳ ಮಕ್ಕಳಿಂದ ಅಮೃತ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ಭಾಗಗಳಿಂದ ಹೊರಟ ನಡಿಗೆ ಶ್ರೀನಿಧಿ ವೃತ್ತದ ಮೂಲಕ ಎನ್ಇಎಸ್ ಮೈದಾನ ತಲುಪಲಿದೆ ಎಂದು ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾಹಿತಿ ನೀಡಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಸಹಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎನ್.ಟಿ.ನಾರಾಯಣರಾವ್, ಮಾಧುರಾವ್, ಎಂ.ಆರ್.ಸೀತಾಲಕ್ಷ್ಮೀ, ಹೆಚ್.ಸಿ.ಶಿವಕುಮಾರ್, ಸುಧೀರ್.ಜಿ.ಎನ್, ಎಂ.ಎಸ್.ಅನಂತದತ್ತ, ಎಂ.ಜಿ.ರಾಮಚಂದ್ರಮೂರ್ತಿ, ಕುಲಸಚಿವ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ರಾಮಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.
Arecanut rate | ಮತ್ತೆ ಏರುಗತಿಯಲ್ಲಿ ಸಾಗಿದ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್?