ಸುದ್ದಿ ಕಣಜ.ಕಾಂ ತೀರ್ಥಹಳ್ಳಿ
THIRTHAHALLI: ಹಣಗೆರೆಕಟ್ಟೆ ಗ್ರಾಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಗ್ರಾಮಸ್ಥರು, ಸಾರ್ವಜನಿಕರು ಹಾಗೂ ಪೊಲೀಸರಿಗೆ ಹಲವು ಸೂಚನೆಗಳನ್ನು ನೀಡಿದರು.
READ | ಯಾರು ರಕ್ತದಾನ ಮಾಡಬಹುದು, ಯಾರು ಮಾಡುವಂತಿಲ್ಲ? ರಕ್ತದ ಮಹತ್ವವೇನು? ರಕ್ತದಾನ ಪ್ರಯೋಜನಗಳೇನು?
ಎಸ್.ಪಿ ಮಿಥುನ್ ಕುಮಾರ್ ನೀಡಿದ ಸೂಚನೆಗಳೇನು?
- ಪ್ರತಿ ಅಮಾವಾಸ್ಯೆ, ಗುರುವಾರ ಮತ್ತು ಭಾನುವಾರದಂದು ಹಣಗೆರೆಕಟ್ಟೆ ದೇವಸ್ಥಾನಕ್ಕೆ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಬರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತದೆಂದು ತಿಳಿಸಿದ್ದು, ಈ ಕುರಿತಂತೆ ಸದರಿ ದಿನಗಳಂದು ಸುಗಮ ಸಂಚಾರ ಮತ್ತು ಭದ್ರಾತೆ ಹಿತದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಹೋಂ ಗಾರ್ಡ್ ಗಳನ್ನು ನಿಯೋಜಿಸಿ, ಬ್ಯಾರಿಕೇಡ್ ಗಳನ್ನು ಅಳವಡಿಸಿ ಕ್ರಮ ಕೈಗೊಳ್ಳಲಾಗುವುದು.
- ಹಣಗೆರೆಕಟ್ಟೆ ದೇವಸ್ಥಾನಕ್ಕೆ ಸಿಸಿ ಟಿವಿ ಕ್ಯಾಮೆರಾವನ್ನು ಅಳವಡಿಸುವಂತೆ ಮತ್ತು ಇನ್ನು ಹೆಚ್ಚಿನ ಬ್ಯಾರಿಕೇಡ್ ಗಳನ್ನು ಒದಗಿಸುವಂತೆ ಕೋರಿದ್ದು, ಈ ಕುರಿತಂತೆ ಮುಜರಾಯಿ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಸಿ.ಸಿ ಟಿವಿ ಕ್ಯಾಮೆರಾಗಳ ಅಳವಡಿಕೆ ಮತ್ತು ಬ್ಯಾರಿಕೇಡ್ ಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು.
- ಹಣಿಗೆರೆಕಟ್ಟೆಯಲ್ಲಿ ಎಲ್ಲ ಸಮುದಾಯದ ಜನರು ಸೌಹಾರ್ದತೆಯಿಂದಿದ್ದು, ಸೌಹಾರ್ದತೆಗೆ ಮತ್ತು ಕಾನೂನು ಸುವ್ಯಸ್ಥೆಗೆ ಧಕ್ಕೆತರುವಂತಹದ್ದು ಕಂಡುಬಂದಲ್ಲಿ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು.
- ಗ್ರಾಮದ ಎಲ್ಲ ವರ್ಗದ ಸದಸ್ಯರುಗಳನ್ನೊಳಗೊಂಡ ಬೀಟ್ ಸಮಿತಿಯನ್ನು ರಚಿಸಿ, ಬೀಟ್ ಸಿಬ್ಬಂದಿಯವರು ನಿರಂತರವಾಗಿ ಗ್ರಾಮಕ್ಕೆ ಭೇಟಿ ನೀಡಿ, ಬೀಟ್ ಸಮಿತಿ ಸಭೆಯನ್ನು ನಡೆಸಿ, ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
- ಗ್ರಾಮದಲ್ಲಿನ ಯುವಕರುಗಳನ್ನು ಗುರುತಿಸಿ, ಯುವಪಡೆಯನ್ನು ರಚಿಸಿ, ಅವರುಗಳು ಬೀಟ್ ಸಿಬ್ಬಂದಿಯೊಂದಿಗೆ ಗಸ್ತು ಮಾಡುವುದು ಹಾಗೂ ಗ್ರಾಮದಲ್ಲಿ ಜರುಗುವ ಘಟನೆ ಮತ್ತು ಕಾನೂನು ಬಾಹಿರ ಚಟುವಟಿಕೆಗಳ ಮಾಹಿತಿಯನ್ನು ನೀಡಿ ಪೆÇಲೀಸ್ ಇಲಾಖೆಗೆ ಸಹಕರಿಸುವುದು.
- ಪ್ರತಿ ಅಮಾವಾಸ್ಯೆ, ಭಾನುವಾರ ಮತ್ತು ಗುರುವಾರಗಳಂದು ಹಣಿಗೆರೆಕಟ್ಟೆಯಲ್ಲಿ ಹೆಚ್ಚಿನ ಸಾರ್ವಜನಿಕರು ಬರುವುದರಿಂದ, ಯುವ ಪಡೆಯ ಸದಸ್ಯರು ಸದರಿ ದಿನಗಳಂದು ಹಾಜರಿದ್ದು ಸುಗಮ ಸಂಚಾರ ವ್ಯವಸ್ಥೆಗೆ ಪೊಲೀಸ್ ಇಲಾಖೆಗೆ ಸಹಕರಿಸುವುದು.
- ಹಣಗೆರೆಕಟ್ಟೆಯಲ್ಲಿ ಇಆರ್.ಎಸ್.ಎಸ್. 112 ವಾಹನದ ಗಸ್ತನ್ನು ಹೆಚ್ಚಿಸುವಂತೆ ಕೋರಿದ್ದು, ಈ ಕುರಿತಂತೆ ಹಣಗೆರೆಕಟ್ಟೆಯ ಕಡೆಗೆ ವಾಹನದ ಗಸ್ತನ್ನು ಹೆಚ್ಚಿಸಲಾಗುವುದು. ಯಾವುದೇ ಅಗತ್ಯ ಮತ್ತು ತುರ್ತು ಸಂದರ್ಭದಲ್ಲಿ 112 ಸಹಾಯವಾಣಿಗೆ ಕರೆಮಾಡಿ ಪೊಲೀಸ್ ಸಹಾಯ ಪಡೆದುಕೊಳ್ಳಬೇಕು.
ತೀರ್ಥಹಳ್ಳಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಗಜಾನನ ವಾಮನ ಸುತಾರ, ಪೊಲೀಸ್ ಉಪಾಧೀಕ್ಷಕರು (ಪ್ರೊ) ಮಂಜುನಾಥ್, ಮಾಳೂರು ವೃತ್ತದ ಸಿಪಿಐ ಪ್ರವೀಣ್ ನೀಲಮ್ಮನವರ್, ನವೀನ್ ಕುಮಾರ್ ಮಠಪತಿ, ಶಿವಾನಂದ್ ಉಪಸ್ಥಿತರಿದ್ದರು.