ಸುದ್ದಿ ಕಣಜ.ಕಾಂ ಶಿರಾಳಕೊಪ್ಪ
SHIRALAKOPPA: ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್ (G.K.Mithun Kumar) ನೇತೃತ್ವದಲ್ಲಿ ಮಂಚಿಕೊಪ್ಪ (Manchikoppa) ಗ್ರಾಮದಲ್ಲಿ ಜನಸಂಪರ್ಕ ಸಭೆಯನ್ನು ನಡೆಸಲಾಯಿತು.
READ | ಮನೆಯೊಂದರ ಮೇಲೆ ಪೊಲೀಸರ ದಿಢೀರ್ ದಾಳಿ, ಇಬ್ಬರು ಅರೆಸ್ಟ್
ಸಭೆಯಲ್ಲಿ ಸಾರ್ವಜನಿಕರಿಗೆ ನೀಡಿದ ಸೂಚನೆಗಳಿವು
- ಗ್ರಾಮದಲ್ಲಿ ಯಾವುದೇ ಘಟನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳದೇ, ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡುವುದು. ಒಂದುವೇಳೆ ಕಾನೂನು ಉಲ್ಲಂಘನೆ (law violation) ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.
- ಪೊಲೀಸ್ ಇಲಾಖೆ (shimoga police department) ವತಿಯಿಂದ ಬಕ್ರೀದ್ (Bakrid festival) ಸಂಬಂಧ ಎಲ್ಲ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದು, ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿರುತ್ತದೆ. ಎಲ್ಲ ಸಾರ್ವಜನಿಕರು ಶಾಂತಿಯುತವಾಗಿ ಹಬ್ಬವನ್ನು ಆಚರಣೆ ಮಾಡುವಂತೆ ಸೂಚಿಸಿದರು.
- ಎಲ್ಲ ಗ್ರಾಮಗಳಿಗೂ ಬೀಟ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದ್ದು, ಅವರು ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ, ಬೀಟ್ ಸಮಿತಿ ಸದಸ್ಯರ ಸಭೆ ನಡೆಸಿ, ಅವರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ಪೊಲೀಸ್ ಇಲಾಖೆ ವತಿಯಿಂದ ಬೀಟ್ ಗಳನ್ನು ನಿರ್ವಹಿಸುವ ಬಗ್ಗೆ ಸ್ಮಾರ್ಟ್ ಇ ಬೀಟ್ (police smart e beat) ಎಂಬ ತಂತ್ರಾಂಶವನ್ನು ಅಭಿವೃದ್ದಿ ಪಡಿಸಲಾಗಿದ್ದು, ಬೀಟ್ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿದ ಬಗ್ಗೆ ತಂತ್ರಾಂಶದಲ್ಲಿ ಅಪ್ ಡೇಟ್ ಆಗುತ್ತದೆ.
- ಗ್ರಾಮದಲ್ಲಿರುವ ಯುವಕರನ್ನು ಒಳಗೊಂಡ ಯುವಪಡೆಯನ್ನು ಈಗಾಗಲೇ ರಚನೆ ಮಾಡಿದ್ದು, ಯುವ ಪಡೆಯ ಸದಸ್ಯರುಗಳು, ಬೀಟ್ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರೊಂದಿಗೆ ಗಸ್ತು ಮಾಡುವುದು ಹಾಗೂ ಗ್ರಾಮದಲ್ಲಿ ಯಾವದೇ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ/ ಯಾವುದೇ ಮಾಹಿತಿಗಳಿದ್ದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಹಕರಿಸುವುದು.
- ವಾಹನ ಸವಾರರು ಕಡ್ಡಾಯವಾಗಿ ವಾಹನಕ್ಕೆ ಸಂಬಂಧಿಸಿದ ಎಲ್ಲ ಅಗತ್ಯ ದಾಖಲಾತಿಗಳನ್ನು ಹೊಂದಿರುವುದು ಮತ್ತು ದ್ವಿ ಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ ಮೇಟ್ ಅನ್ನು ಧರಿಸುವುದು. ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು (traffic rules) ಕಡ್ಡಾಯವಾಗಿ ಪಾಲನೆ ಮಾಡುವುದು.
- ಯಾವುದೇ ತುರ್ತು ಸಂದರ್ಭದಲ್ಲಿ ERSS – 112 ಸಹಾಯವಾಣಿಗೆ ಕರೆಮಾಡಿ ಪೊಲೀಸ್ ಸಹಾಯ ಪಡೆದುಕೊಳ್ಳುವುದು.
ಶಿಕಾರಿಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಶಿವಾನಂದ ಮದರಕಂಡಿ, ಪೊಲೀಸ್ ವೃತ್ತ ನಿರೀಕ್ಷಕ ರುದ್ರೇಶ್, ಪಿಎಸ್.ಐ ಮಂಜುನಾಥ್, ಮಂಚಿಕೊಪ್ಪ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.