ಸುದ್ದಿ ಕಣಜ.ಕಾಂ ಹೊಸನಗರ
HOSANAGAR: ಕೂಲಿಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ರಿಪ್ಪನ್’ಪೇಟೆ(Ripponpet)ಯ ಬಾಳೂರು ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
ಷಣ್ಮುಖ(51) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರು ಕೂಲಿಕೆಲಸ ಅರಸಿ ಬಾಳೂರಿಗೆ ಬಂದಿದ್ದರು ಎನ್ನಲಾಗಿದೆ.
ಖಚಿತ ಕಾರಣ ತಿಳಿದುಬಂದಿಲ್ಲ
ಷಣ್ಮುಖ ಅವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಜೆ ಸ್ಥಳೀಯರು ಆತನನ್ನು ಕರೆದರೂ ಪ್ರತಿಕ್ರಿಯೆ ನೀಡಿಲ್ಲ. ಬಾಗಿಲು ತೆರೆದು ನೋಡಿದಾಗ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಿಪ್ಪನ್’ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Job Fair | ಹೋಟೆಲ್ ಉದ್ಯಮದ ಉದ್ಯೋಗ ಮೇಳ, ಪ್ರತಿಭೆಗಳಿಗೆ ಚಿನ್ನದಂಥ ಅವಕಾಶ