ಸುದ್ದಿ ಕಣಜ.ಕಾಂ ಹೊಸನಗರ
HOSANAGAR: ತಾಲೂಕಿನ ಶಿವಪುರ ಗಂದ್ರಳ್ಳಿ ಗ್ರಾಮದ ಗೋವಿಂದ ನಾಯ್ಕ ಅವರ ಮನೆಯ ಹೆಂಚು ತಗೆದು ಕಳ್ಳತನ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸನಗರ ತಾಲೂಕು ಬಿಳಕಿ ಗ್ರಾಮದ ಸುದರ್ಶನ್, ಆದರ್, ಮತ್ತು ಮದುಸೂದನ್ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿತರಿಂದ ಪ್ರಕರಣಕ್ಕೆ ಸಂಬಂಧಿಸಿದ ಅಂದಾಜು ₹3,00,000 ಮೌಲ್ಯದ ಒಟ್ಟು 103 ಗ್ರಾಂ ಬಂಗಾರದ ಆಭರಣಗಳು ಹಾಗೂ ಬೆಳ್ಳಿಯ ಒಡವೆಗಳು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.
READ | ಹಿಂದೂ ಯುವಕರ ಮೇಲಿನ ಹಲ್ಲೆ ಪ್ರಕರಣ, ಇದುವರೆಗಿನ ಬೆಳವಣಿಗೆಗಳೇನು?
ತಂಡದ ಕಾರ್ಯಕ್ಕೆ ಮೆಚ್ಚುಗೆ
ಪ್ರಕರಣದಲ್ಲಿ ಕಳವಾದ ಮಾಲು ಮತ್ತು ಆರೋಪಿತರ ಪತ್ತೆಗಾಗಿ ಎಸ್.ಪಿ. ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ ಅನಿಲ್ ಕುಮಾರ್ ಭೂಮರಡ್ಡಿ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಗಜಾನನ ವಾಮನ ಸುತಾರ, ಹೊಸನಗರ ವೃತ್ತದ ಪಿಐ ಗಿರೀಶ್ ಮೇಲ್ವಿಚಾರಣೆಯಲ್ಲಿ ರಿಪ್ಪನಪೇಟೆ ಠಾಣೆಯ ಪಿಎಸ್ಐ ಪ್ರವೀಣ್ ನೇತೃತ್ವದಲ್ಲಿ ಸಿಬ್ಬಂದಿ ಉಮೇಶ್, ಶಿವಕುಮಾರ್ ನಾಯ್ಕ, ಪರಮೇಶ್, ಸಂತೋಷ್, ಚಾಲಕ ಮದುಸೂಧನ್ ಅರವರನ್ನು ಒಳಗೊಂಡ ತಂಡ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿದೆ. ಕಾರ್ಯಕ್ಕೆ ಎಸ್ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
AITA Code | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದೊರಕಿತು ಐಎಟಿಎ ಕೋಡ್, ಏನಿದು, ಪ್ರಯೋಜನಗಳೇನು?