ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದಲ್ಲಿ ಜನರನ್ನು ಯಾಮಾರಿಸಿ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಗ್ಯಾಂಗ್ ಅನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಸಫಲರಾಗಿದ್ದಾರೆ. ಸ್ವಾಮಿ ವಿವೇಕಾನಂದ ಬಡಾವಣೆಯ ಮೊಬೈಲ್ ಕಳ್ಳತನ ಪ್ರಕರಣ ಬೇಧಿಸಲು ಹೋದಾಗ ಗ್ಯಾಂಗ್ ಪೊಲೀಸರ ಕೈಸಿಕ್ಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ.
READ | ಶಿವಮೊಗ್ಗದಲ್ಲಿ ಒಂದೇ ದಿನ 1,587 ಕೇಸ್ ದಾಖಲು, ಕಾರಣವೇನು?
ಲಕ್ಷಾಂತರ ಮೌಲ್ಯದ ಮೊಬೈಲ್’ಗಳು ಸೀಜ್
ತುಂಗಾನಗರ ಪೊಲೀಸ್ ಠಾಣೆಯ 1, ದೊಡ್ಡಪೇಟೆ ಪೊಲೀಸ್ ಠಾಣೆಯ 1 ಮತ್ತು ವಿನೋಬನಗರ ಪೊಲೀಸ್ ಠಾಣೆಯ 1 ಪ್ರಕರಣ ಸೇರಿದಂತೆ ಒಟ್ಟು 3 ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ 3.25 ಲಕ್ಷ ರೂಪಾಯಿ ಮೌಲ್ಯದ ಒಟ್ಟು 23 ವಿವಿಧ ಕಂಪನಿಯ ಮೊಬೈಲ್ ಪೋನ್ ಗಳೂ ಮತ್ತು ಕೃತ್ಯಕ್ಕೆ ಬಳಸಿದ ದ್ವಿ ಚಕ್ರ ವಾಹನವನ್ನು ಸೀಜ್ ಮಾಡಲಾಗಿದೆ.
ಒಂದು ಪ್ರಕರಣ ಬೇಧಿಸಲು ಹೋಗಿ ಗ್ಯಾಂಗ್ ಸೆರೆ
ಮೇ 17ರ ರಾತ್ರಿ ಶಿವಮೊಗ್ಗ ಸ್ವಾಮಿವಿವೇಕಾನಂದ ಬಡಾವಣೆಯ ವ್ಯಕ್ತಿಯೊಬ್ಬರು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಳ ಗೌಡ ಬಡಾವಣೆಯ ಚಂದನ ಪಾರ್ಕ್ ನ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಒಂದೇ ಬೈಕಿನಲ್ಲಿ ಬಂದ ಯಾರೋ 3 ಜನರು ಆ ವ್ಯಕ್ತಿಯ ಬಳಿ ಇದ್ದ ಮೊಬೈಲ್ ಪೋನ್ ಅನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಸುಲಿಗೆ ಪ್ರಕರಣ ದಾಖಲಿಸಲಾಗಿತ್ತು.
ತನಿಖಾ ತಂಡದ ಕಾರ್ಯಕ್ಕೆ ಪ್ರಶಂಸೆ
ಎಸ್.ಪಿ. ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ. ಅನಿಲ್ ಕುಮಾರ್ ಭೂಮರಡ್ಡಿ ಮಾರ್ಗದರ್ಶನದಲ್ಲಿ ಡಿವೈಎಸ್.ಪಿ. ಬಾಲರಾಜ್ ಮುಂದಾಳತ್ವದಲ್ಲಿ ತುಂಗಾನಗರ ಪಿಐ ಮಂಜುನಾಥ್ ನೇತೃತ್ವದ ಪಿಎಸ್.ಐ ಬಿ.ರಾಜುರೆಡ್ಡಿ, ಕುಮಾರ್ ಕುರಗುಂದ, ಎಎಸ್.ಐ ಮನೋಹರ್, ಸಿಬ್ಬಂದಿ ಎಚ್.ಸಿ.ಕಿರಣ್ ಮೋರೆ, ಅರುಣ್ ಕುಮಾರ, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್ ಅವರುಗಳನ್ನೊಳಗೊಂಡ ತನಿಖಾ ತಂಡ ಪ್ರಕರಣವನ್ನು ಬೇಧಿಸಿದೆ. ತನಿಖಾ ತಂಡದ ಉತ್ತಮ ಕಾರ್ಯವನ್ನು ಎಸ್.ಪಿ. ಪ್ರಶಂಸಿಸಿದ್ದಾರೆ.
Arrest | ಎಂಟು ಮನೆಗಳ್ಳತನಗಳನ್ನು ಬೇಧಿಸಿದ ಪೊಲೀಸ್, ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸೀಜ್