ಸುದ್ದಿ ಕಣಜ.ಕಾಂ ತೀರ್ಥಹಳ್ಳಿ
THIRTHAHALLI: ಪಟ್ಟಣದಲ್ಲಿ ಮಹಿಳೆಯನ್ನು ಅಕ್ರಮವಾಗಿ ಬಂಧನದಲ್ಲಿರಿಸಿ ವೇಶ್ಯಾವಾಟಿಕೆ ಮಾಡುತ್ತಿದ್ದಾರೆ ಎನ್ನಲಾದ ಆರೋಪದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಿ, ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ.
ಕಮ್ಮರಡಿ ಗ್ರಾಮದ ಜೆ.ಪಿ.ನಗರದ ಕೆ.ಎಸ್.ಪ್ರಶಾಂತ್(33), ಮೇಲಿನ ಕುರುವಳ್ಳಿದ ಎಂ.ಮಂಜುನಾಥ್ (37) ಬಂಧಿತರು.
READ | ಕೈಗಾರಿಕೆಗಳನ್ನು ಬಂದ್ ಮಾಡುವ ಎಚ್ಚರಿಕೆ, ಕಾರಣವೇನು, ಇಲ್ಲಿವೆ 5 ಬೇಡಿಕೆಗಳು
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ
ತೀರ್ಥಹಳ್ಳಿ ಪಟ್ಟಣದ ವಾಸದ ಮನೆಯೊಂದರಲ್ಲಿ ಮಹಿಳೆಯರನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ಮಾಹಿತಿಯ ಮೇರೆಗೆ ತೀರ್ಥಹಳ್ಳಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ಕಾರ್ಯಾಚರಣೆ ನಡೆಸಲಾಗಿದೆ.
ತೀರ್ಥಹಳ್ಳಿ ಠಾಣೆಯ ಪಿಐ ಜೆ.ಅಶ್ವತ್ಥಗೌಡ, ಪಿಎಸ್.ಐ ಸಾಗರ್ ಅತ್ತರವಾಲ, ಗಾದಿಲಿಂಗಪ್ಪ ಗೌಡರ್ ಸಿಬ್ಬಂದಿ ಹಾಗೂ ಮಹಿಳಾ ಸಾಂತ್ವನ ಕೇಂದ್ರದ ಕಿರಣ್ ಕುಮಾರಿ ಅವರನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.