ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ದ್ರೌಪದಮ್ಮ ವೃತ್ತ(Draupadamma Circle) ಮತ್ತು ಟಿಪ್ಪುನಗರದಲ್ಲಿ ಭಾನುವಾರ ಅನ್ಯಕೋಮಿನವರ ನಡುವೆ ನಡೆದ ಹೊಡೆದಾಟ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ನಿನ್ನೆ ಸಂಜೆಯಿಂದ ಇದುವರೆಗೆ ಹಲವು ಬೆಳವಣಿಗೆಗಳಾಗಿವೆ.
READ | ಶಿವಮೊಗ್ಗದಲ್ಲಿ ಹಲ್ಲೆ ಪ್ರಕರಣದ ಬಗ್ಗೆ ಎಸ್.ಪಿ ಮಿಥುನ್ ಕುಮಾರ್ ಹೇಳಿದ್ದೇನು?
- ಭಾನುವಾರ ಸಂಜೆ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಪ್ಪುನಗರದಲ್ಲಿ ಅನ್ಯಕೋಮಿನ ಯುವಕರ ನಡುವೆ ಜಗಳವಾಗಿದೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆಟೋ ಮತ್ತು ಬೈಕ್ ತಾಗಿರುವ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿಯಾಗಿದ್ದು, ಸಂದೇಶ್ ಎಂಬಾತನ ಕಣ್ಣಿನ ಬಳಿ ಹೊಡೆಯಲಾಯಿತು.
- ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ದ್ರೌಪದಮ್ಮ ವೃತ್ತದ ಬಳಿ ಭಾನುವಾರ ಸಂಜೆ ಮತ್ತೊಂದು ಹಲ್ಲೆ ನಡೆದಿದೆ. ಈ ಘಟನೆಯಲ್ಲಿ ವಿಜಯಕುಮಾರ್ ಎಂಬಾತನ ಬೆನ್ನಿಗೆ ಚೂಪಾದ ಆಯುದ್ಧದಿಂದ ಚುಚ್ಚಲಾಗಿದೆ ಎಂದು ಎಸ್.ಪಿ ಮಿಥುನ್ ಕುಮಾರ್ ಅವರೇ ಸ್ಪಷ್ಟಪಡಿಸಿದ್ದಾರೆ. ಇದು ವೈಯಕ್ತಿಕ ಕಾರಣಕ್ಕಾಗಿ ಗುರುಸಿದ್ದಪ್ಪ ಹಾಗೂ ತಸ್ರು ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
- ದ್ರೌಪದಮ್ಮ ವೃತ್ತದ ಬಳಿ ವಿಜಯಕುಮಾರ್ ಎಂಬಾತನಿಗೆ ಚೂಪಾದ ಆಯುದ್ಧದಿಂದ ಚುಚ್ಚಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆಗೆ ದೌಡಾಯಿಸಿದರು. ಆಸ್ಪತ್ರೆ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಅಲ್ಲಿ ಆಗಮಿಸಿದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದರು.
- ಸಾಮಾಜಿಕ ಜಾಲತಾಣಗಳಲ್ಲಿ ಸೌಹಾರ್ದತೆ ಕಲಕುವ ಸಂದೇಶಗಳನ್ನು ಕಳುಹಿಸಲಾಗುತ್ತಿತ್ತು. ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲಾಗುತಿತ್ತು. ತಕ್ಷಣ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ಅವರು ವಾಟ್ಸಾಪ್ ನಲ್ಲಿ ಸಂದೇಶವನ್ನು ಕಳುಹಿಸಿ, ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಎರಡೂ ಪ್ರತ್ಯೇಕ ಘಟನೆಗಳಾಗಿದ್ದು ಪರಸ್ಪರ ಸಂಬಂಧವಿಲ್ಲ. ಮಾಹಿತಿ ಪ್ರಕಟಣೆಗೂ ಮುಂಚೆ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಎಂದು ತಿಳಿಸಿದ್ದರು.
- ಸೋಮವಾರ ಬೆಳಗ್ಗೆ ವಾಟ್ಸಾಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್, “ಹಲ್ಲೆ ಘಟನೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ಆರೋಪಿ ಮತ್ತು ಹಲ್ಲೆಗೊಳಗಾದವರು ಅಪರಾಧ ಹಿನ್ನೆಲೆ ಹೊಂದಿದವರಾಗಿದ್ದಾರೆ” ಎಂದು ತಿಳಿಸಿದ್ದಾರೆ.
- ನಗರದ ಅಮೀರ್ ಅಹಮ್ಮದ್ ವೃತ್ತದಲ್ಲಿ ಕೆಎಸ್.ಆರ್.ಪಿ. ವಾಹನವನ್ನು ನಿಯೋಜನೆ ಮಾಡಲಾಗಿದೆ. ಎಲ್ಲೆಡೆ ಪೊಲೀಸರ ಗಸ್ತು ಜೋರಾಗಿದೆ.
Heart attack | ಚಲಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕನಿಗೆ ಹಾರ್ಟ್ ಅಟ್ಯಾಕ್, ಮುಂದೇನಾಯ್ತು?