ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕಾರು ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ (acciddent) ಸಂಭವಿಸಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು (sakrebyle) ಹತ್ತಿರ ಮಂಗಳವಾರ ಸಂಜೆ ಸಂಭವಿಸಿದೆ.
READ | ಇಬ್ಬರನ್ನು ಬಲಿ ಪಡೆದ, ವೈದ್ಯನ ಮೇಲೆ ಹಲ್ಲೆ ಮಾಡಿದ ‘ಅಭಿಮನ್ಯು’ ರಿಲೀಸ್!
ಮೃತನನ್ನು ಮಂಗಳೂರಿನ (mangalore) ಮಹಮ್ಮದ್ ಅಶ್ಫಕ್(40) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ (meggan hospital) ಕರೆದುಕೊಂಡು ಬರಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಆಗಮಿಸುತ್ತಿದ್ದ ಕಾರು ಹಾಗೂ ತೀರ್ಥಹಳ್ಳಿ(thirthahalli)ಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನಲ್ಲಿ ಶಿವಮೊಗ್ಗದ (shimoga) ಪ್ರತಿಷ್ಠಿತ ಆಸ್ಪತ್ರೆಯೊಂದರ ದಾಖಲೆಗಳು ಲಭಿಸಿದ್ದು, ಚಿಕಿತ್ಸೆಗೆಂದು ಮಂಗಳೂರಿನಿಂದ ಶಿವಮೊಗ್ಗಕ್ಕೆ ಬಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ತುಂಗಾನಗರ ಠಾಣೆ(tunga nagar police station)ಯಲ್ಲಿ ಪ್ರಕರಣ ದಾಖಲಾಗಿದೆ.