ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಗಾಂಧಿ ಪಾರ್ಕ್’ನ (Gandhi park) ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane ratnakar) ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು.
READ | ವಿದ್ಯಾರ್ಥಿಯನ್ನು ಬಲಿ ಪಡೆದ, ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ‘ಅಭಿಮನ್ಯು’ಗೆ ರಿಲೀಸ್!
ಸತ್ಯಾಗ್ರಹದಲ್ಲಿ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್, ಪ್ರಮುಖರಾದ ಆರ್.ಎಂ. ಮಂಜುನಾಥ್ ಗೌಡ, ಆರ್. ಪ್ರಸನ್ನಕುಮಾರ್, ಎನ್. ರಮೇಶ್, ಎಸ್.ಪಿ. ಶೇಷಾದ್ರಿ, ಎಚ್.ಸಿ. ಯೋಗೇಶ್, ಚಂದ್ರಭೂಪಾಲ್, ವಿಜಯ್, ಕಲೀಂ ಪಾಶಾ, ಇಸ್ಮಾಯಿಲ್ ಖಾನ್, ವಿನೋದ್ಕುಮಾರ್, ಕಲಗೋಡು ರತ್ನಾಕರ್, ಎಚ್.ಪಿ.ಗಿರೀಶ್ ಕೆ. ದೇವೇಂದ್ರಪ್ಪ, ವಿನಯ್ ತಾಂಡ್ಲೆ, ಬಾಲಾಜಿ ಶೆಟ್ಟಿ, ವಿಶ್ವನಾಥಕಾಶಿ, ಮಧುಸೂದನ್, ಚೇತನ್, ಸುವರ್ಣ ನಾಗರಾಜ್, ನಾಗರಾಜ್, ಮಂಜುನಾಥ್ ಪುರಲೆ, ಆರೀಫ್, ಯಮುನಾ ರಂಗೇಗೌಡ, ಕವಿತಾ ರಾಘವೇಂದ್ರ, ವಿಜಯಕುಮಾರ್ ಧನಿ, ವೇದಾ ವಿಜಯಕುಮಾರ್ ಉಪಸ್ಥಿತರಿದ್ದರು.
ಅಧಿಕಾರ ಇಲ್ಲದೆ ಬದುಕಲು ಸಾಧ್ಯವೇ ಇಲ್ಲ ಎಂಬಂತೆ ಬಿಜೆಪಿಯವರು ವರ್ತಿಸುತ್ತಿದ್ದು, ಹಪಾಹಪಿತನಕ್ಕೆ ಒಳಗಾಗಿದ್ದಾರೆ. ಬಿಜೆಪಿಯವರು ಕೊಟ್ಟ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಜಾತಿ, ಧರ್ಮ, ಹಣದ ಮೇಲೆ ಅದೂ ಸಾಧ್ಯವಾಗದಿದ್ದರೆ ಶಾಸಕರನ್ನು ಕೊಂಡುಕೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನೇ ಖರೀದಿ ಮಾಡಿದ್ದಾರೆ. ಹಿಂದೂ ಧರ್ಮದ ಪ್ರತಿಪಾದಕ ಗಾಂಧೀಜಿಯವರನ್ನೇ ದೂರ ತಳ್ಳುತ್ತಿದ್ದಾರೆ. ಅವರಿಗೆ ಅಂಬೇಡ್ಕರ್ ಬಗ್ಗೆ ಮಾತನಾಡುವ ಧೈರ್ಯವೇ ಇಲ್ಲ. ಅಂಬೇಡ್ಕರ್ ಅವರನ್ನು ಕಡೆಗಣಿಸಿದರೆ ಅವರು ಅಧಿಕಾರಕ್ಕೆ ಬರುವುದೂ ಇಲ್ಲ. ಹಿಂದದೂ ಧರ್ಮದಲ್ಲಿ ಇರುವ ನ್ಯೂನತೆ ಸರಿಪಡಿಸುವ ಬಗ್ಗೆ ಮಾತಾಡುವುದೇ ಇಲ್ಲ.
– ಕಿಮ್ಮನೆ ರತ್ನಾಕರ್, ಮಾಜಿ ಸಚಿವ
ಉಪವಾಸ ಸತ್ಯಾಗ್ರಹಕ್ಕೇನು ಕಾರಣ? ಆರೋಪಗಳೇನು?
- ಕೇಂದ್ರದ ಬಿಜೆಪಿ ಸರ್ಕಾರ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ಅವರ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳು ಹುಸಿಯಾಗಿವೆ. ಉದ್ಯೋಗ ಸೃಷ್ಟಿಯಲ್ಲಿ ವಿಫಲರಾಗಿದ್ದಾರೆ.
- ಮನೆಗಳನ್ನು ಕಟ್ಟಿಸಿಲ್ಲ. ಹಣ ಹಾಕುತ್ತೇವೆ ಎಂದಿದ್ದರು. ಅದನ್ನೂ ಕೊಟ್ಟಿಲ್ಲ. ಮಹಿಳೆಯರಿಗೆ ಮದುವೆಗೆ ಚಿನ್ನ ಕೊಡುತ್ತೇವೆ ಎಂದಿದ್ದರು. ಅದನ್ನೂ ಕೊಟ್ಟಿಲ್ಲ. ಯಾವ ಭರವಸೆಗಳನ್ನೂ ಅವರು ಈಡೇರಿಸಿಲ್ಲ. ಈಗ ರಾಜ್ಯ ಸರ್ಕಾರಕ್ಕೆ ಅಕ್ಕಿಯನ್ನೂ ಕೊಡಲಿಲ್ಲ.
- ಕೇಂದ್ರ ಸರ್ಕಾರ ಕಳೆದ 9 ವರ್ಷಗಳ ಹಿಂದೆಯೇ ಹಲವು ಭರವಸೆಗಳನ್ನು ನೀಡಿತ್ತು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಹೇಳಿತ್ತು. ಅದರಂತೆ 9 ವರ್ಷದಲ್ಲಿ 18 ಕೋಟಿ ಉದ್ಯೋಗಗಳನ್ನು ನೀಡಬೇಕಿತ್ತು. ಆದರೆ ನೀಡುವುದಿರಲಿ, ಇರುವ ಉದ್ಯೋಗಗಳನ್ನೇ ಕಸಿದುಕೊಂಡಿದೆ.
- ದೇಶದ ಎಲ್ಲ ರಾಜ್ಯಗಳನ್ನು ಒಕ್ಕೂಟ ವ್ಯವಸ್ಥೆಯಲ್ಲಿ ನೋಡಿಕೊಳ್ಳುವುದು ಪ್ರಧಾನಿಯವರ ಜವಾಬ್ದಾರಿ. ಈಗ ರಾಜ್ಯ ಸರ್ಕಾರಕ್ಕೆ ಅಕ್ಕಿ ಕೊಡಲ್ಲ ಎಂದು ಹೇಳುತ್ತಿದ್ದಾರೆ. ಇದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟಾಗುವುದಿಲ್ಲವೇ?