ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಐಲೆಟ್ಸ್ ಡಯಾಬಿಟಿಸ್ ಆಸ್ಪತ್ರೆ, ಬೆಂಗಳೂರಿನ ಗರ್ಭಗುಡಿ ಐವಿಎಫ್ ಸೆಂಟರ್, ಮಣಿಪಾಲ್ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಐಲೆಟ್ಸ್ ಆಸ್ಪತ್ರೆಯಲ್ಲಿ ಜು.14ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರೀತಮ್ ಹೇಳಿದರು.
READ | ಶಿವಮೊಗ್ಗದಲ್ಲಿ ತಗ್ಗಿದ ಮಳೆ, ಯಾವ ತಾಲೂಕಿನಲ್ಲಿ ಎಷ್ಡಾಗಿದೆ ಮಳೆ?
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಜೆತನ ಎನ್ನುವುದು ಆಹಾರದ ಕ್ರಮ, ತಡವಾದ ಮದುವೆ, ಮದ್ಯ ವ್ಯಸನ ಹೀಗೆ ಹಲವು ಕಾರಣಗಳಿಂದ ಆಗುತ್ತಿದೆ. ರಾಜ್ಯದಲ್ಲಿಯೂ ಕೂಡ ಈ ಸಮಸ್ಯೆ ಹೆಚ್ಚಾಗಿರುವುದರಿಂದ ಐವಿಎಫ್ ಸೆಂಟರ್ಗಳು ಹೆಚ್ಚಾಗುತ್ತಿವೆ. ಶಿವಮೊಗ್ಗದಲ್ಲಿಯೂ ಇಂತಹ ಆಸ್ಪತ್ರೆಯ ಅವಶ್ಯಕತೆಯನ್ನು ಮನಗಂಡು ಗರ್ಭಗುಡಿ (Garbhagudi) ಐವಿಎಫ್ ಸೆಂಟರ್ನ ಸಹಯೋಗದೊಂದಿಗೆ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇಲ್ಲಿಯೇ ಆಸ್ಪತ್ರೆ ತೆರೆಯಲು ಉದ್ದೇಶಿಸಲಾಗಿದೆ ಎಂದರು.
ಭಾರತದಲ್ಲಿ ಬಂಜೆತನ ಎನ್ನುವುದು ಸಾಮಾನ್ಯವಾಗಿದೆ. ಜನಸಂಖ್ಯಾ ಸ್ಫೋಟ ಇಂದು ಇಳಿಮುಖವಾಗುತ್ತಿದೆ. ಶತಮಾನಕ್ಕೊಮ್ಮೆ ಪ್ರಕೃತಿಯೇ ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುತ್ತದೆ. ಈಗಾಗಲೇ ಜಗತ್ತಿನ ಹಲವು ದೇಶಗಳಲ್ಲಿ ಜನಸಂಖ್ಯೆ ಇಳಿಮುಖವಾಗಿದೆ. ಭಾರತವೂ ಇದಕ್ಕೆ ಹೊರತಾಗಿಲ್ಲ.
– ಡಾ. ಪ್ರೀತಮ್, ವ್ಯವಸ್ಥಾಪಕ ನಿರ್ದೇಶಕ, ಐಲೆಟ್ಸ್ ಡಯಾಬಿಟಿಸ್ ಆಸ್ಪತ್ರೆ
ಐವಿಎಫ್ ಸೆಂಟರ್ನ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಸಂಜಯ್ ಮಾತನಾಡಿ, ಜು.14ರಂದು ನಡೆಯುವ ತಪಾಸಣಾ ಶಿಬಿರದಲ್ಲಿ ನೋಂದಣಿ ಶುಲ್ಕವನ್ನು ನಾಲ್ಕು ಸಾವಿರದಿಂದ ಎರಡು ಸಾವಿರಕ್ಕೆ ಇಳಿಸಲಾಗಿದೆ. ಶಿಬಿರದಲ್ಲಿ ವೈದ್ಯಕೀಯ ಸಲಹೆ (medical advice), ಸಮಾಲೋಚನೆ (Consultation) ಮತ್ತು ವೀರ್ಯ ವಿಶ್ಲೇಷಣೆ (Sperm analysis) ಮಾಡಲಾಗುವುದು. ಸುಪ್ರಸಿದ್ಧ ಸಂತಾನೋತ್ಪತ್ತಿ ತಜ್ಞರಾದ ಡಾ. ಆಶಾ ಎಸ್. ವಿಜಯ್ ತಂಡದವರು ಆಗಮಿಸಲಿದ್ದಾರೆ ಎಂದರು.
ಶಿಬಿರದಲ್ಲಿ ಪರೀಕ್ಷೆಯ ನಂತರ ಅಗತ್ಯವಿರುವ ದಂಪತಿಗಳಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುವುದು. ಉಚಿತ ವಸತಿ ಸೌಲಭ್ಯ ಇರುತ್ತದೆ. ಇದಕ್ಕಾಗಿ ಇರುವ ವಿವಿಧ ಪ್ಯಾಕೇಜ್ಗಳಲ್ಲಿ ಭಾರೀ ರಿಯಾಯಿತಿ ನೀಡಲಾಗುತ್ತದೆ. ಇದರ ಸೌಲಭ್ಯವನ್ನು ಶಿವಮೊಗ್ಗ ಅಲ್ಲದೆ ಸುತ್ತಮುತ್ತಲ ಜಿಲ್ಲೆಯ ದಂಪತಿಗಳು ಪಡೆಯಬಹುದಾಗಿದೆ ಎಂದರು.
ಪ್ರಮುಖರಾದ ವಿನಯ್ ಜಾನ್, ಕುಮಾರ್ ಇದ್ದರು.