ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯದ ವಿರುದ್ದ ಕೇಂದ್ರ ಬಿಜೆಪಿ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ (shimoga district youth congress) ವತಿಯಿಂದ ಸಂಸದರ ಮನೆಗೆ ಮುತ್ತಿಗೆ ಯತ್ನಿಸಿದ ಯುವ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
READ | ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಮತ್ತೆ ಜೀವಕಳೆ
ರಾಜ್ಯದ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ನೀಡಲು ನಿರಾಕರಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನು ಹಾಗೂ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಸೇರಿದಂತೆ ಹಲವು ಪರಿಹಾರದ ಹಣವನ್ನು ಬಿಡುಗಡೆ ಮಾಡದೆ ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆಯನ್ನು ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನು ಮತ್ತು ದ್ವೇಷ ರಾಜಕಾರಣವನ್ನು ಪ್ರತಿಭಟನಾನಿರತರು ಖಂಡಿಸಿದರು.
ರಾಜ್ಯದ ಪರ ದನಿ ಎತ್ತದ ಸಂಸದರು: ಆರೋಪ
ಕರ್ನಾಟಕದಿಂದ ಆಯ್ಕೆಯಾದ 25 ಬಿಜೆಪಿ ಸಂಸದರು ಸಂಸತ್ತಿನಲ್ಲಿ ರಾಜ್ಯದ ಪರವಾಗಿ ತುಟಿ ಬಿಚ್ಚದೆ ಅಸಮರ್ಥರಾಗಿರುವ ಸಂಸದರ ವಿರುದ್ಧ ಪ್ರತಿಭಟನೆ ನಡೆಸಿ ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ 25ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ರಾಷ್ಟ್ರಪತಿ ಮಧ್ಯ ಪ್ರವೇಶಕ್ಕೆ ಆಗ್ರಹ
ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ರಾಜ್ಯಕ್ಕೆ ಬರಬೇಕಾದ ಹೆಚ್ಚುವರಿ ಅಕ್ಕಿಯನ್ನು ಖರೀದಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಈಟಿ ನಿತಿನ್, ಪ್ರಮುಖರಾದ ಎಸ್ . ಕುಮರೇಶ್, ಅಫ್ತಾಬ್ ಅಮಹಮದ್ , ಆರ್. ಕಿರಣ್, ಟಿವಿ ರಂಜಿತ್,ಸಂದೀಪ್ ಸುಂದರ್ ರಾಜ್ ರಾಹುಲ್, ,ಕೆ.ಎಲ್ ಪವನ್, ಪೂರ್ಣೇಶ್, ಮಸ್ತಾನ್ ಮೋಹನ್ ಸೋಮಿನಕೊಪ್ಪ, ಸುಹಾಸ್ ಗೌಡ , ಧರ್ಮ ಬೊಮ್ಮನಕಟ್ಟೆ, ಎನೋಷ್ , ನದೀಮ್, ಅಡ್ಡು ಟಿಪ್ಪು ನಗರ, ಮಲ್ಲೇಶ್ ಜಟಪಟ ನಗರ, ಪ್ರತಾಪ್ ಉಪಸ್ಥಿತರಿದ್ದರು.