ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆಯಿಂದಲೇ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ಸೋಮವಾರ ಶಾಲೆಗಳಿಗೆ ರಜೆ ನೀಡಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ (C.R.Parameshwarappa) ಆದೇಶ ಹೊರಡಿಸಿದ್ದಾರೆ.
ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದ್ದು, ಭಾನುವಾರ ಮತ್ತಷ್ಟು ಬಿರುಸುಗೊಂಡಿದೆ. ವಿದ್ಯಾರ್ಥಿಗಳ ಸುರಕ್ಷತೆ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.
ಕಾಲೇಜುಗಳ ರಜೆ ಆಯಾ ಪ್ರಾಂಶುಪಾಲರಿಗೆ ಬಿಟ್ಟದ್ದು
ಈಗಾಗಲೇ ಜು. 24ರಂದು ಶಾಲೆಗಳಿಗೆ ಘೋಷಣೆ ಮಾಡಲಾಗಿದೆ. ಆದರೆ, ಇದುವರೆಗೆ ಪಿಯು ಕಾಲೇಜುಗಳಿಗೆ ರಜೆ ನೀಡಿಲ್ಲ. ಒಂದುವೇಳೆ, ಮಳೆ ಮತ್ತಷ್ಟು ಹೆಚ್ಚಿದರೆ ರಜೆಯ ವಿಚಾರವಾಗಿ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಆಯಾ ಪ್ರಾಂಶುಪಾಲರಿಗೆ ನೀಡಲಾಗಿದೆ.