ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯದ್ಯಂತ ಸೆಲ್ಫಿ ಗಳಿಗೆ ಹಲವು ದುರ್ಘಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ಜಿಲ್ಲೆಯ ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಸೆಲ್ಫಿ ತೆಗೆದುಕೊಳ್ಳುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಅಂತಹ ಸ್ಥಳಗಳಿಗೆ ಭೇಟಿ ನೀಡದಂತೆ ಕೋರಲಾಗಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ಇದರಿಂದಾಗಿ ನದಿಗಳು, ಹಳ್ಳಗಳು ತುಂಬಿ, ಅಪಾಯಮಟ್ಟವನ್ನು ತಲುಪಿ ಹರಿಯುತ್ತಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು, ಈಜಾಡುವುದು ಮತ್ತು ಸೆಲ್ಫಿ ತೆಗೆದುಕೊಳ್ಳುವುದನ್ನು ಹಾಗೂ ಈ ರೀತಿಯ ಅಪಾಯಕಾರಿ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಭೇಟಿಯನ್ನು ನೀರಿನ ಹರಿವು ಕಡಿಮೆಯಾಗುವವರೆಗೆ ಸಂಬಂಧಪಟ್ಟ ಇಲಾಖೆಗಳಿಂದ ನಿಷೇದಿಸಲಾಗಿರುತ್ತದೆ.
ಈ ಬಗ್ಗೆ ಈಗಾಗಲೇ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೂಚನಾ ಫಲಕಗಳನ್ನು ಅಳವಡಿಸಿ ಸಿಬ್ಬಂದಿಯನ್ನು ನಿಯೋಜಿಸಲಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ನೀರಿನ ಹರಿವು ಕಡಿಮೆಯಾಗುವವರೆಗೆ ನಿಷೇಧಿತ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡದೇ ಸಹಕರಿಸಲು ಕೋರಿದೆ.
Schools holiday | ಶಿವಮೊಗ್ಗದಲ್ಲಿ ಭಾರೀ ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ, ಕಾಲೇಜುಗಳ ಕಥೆ ಏನು?